ಬುದ್ಧಿವಂತ ಕ್ರಿಮಿನಲ್ ಎಕೆ ಸಿಂಗ್ ಶೂಟೌಟ್

ಪೀಣ್ಯದ ಪಟೇಲಪ್ಪ ನಗರದ ನಿವಾಸಿಯಾಗಿದ್ದ ಎಕೆ ಸಿಂಗ್ ಉತ್ತರ ಪ್ರದೇಶ ಮೂಲದವನು. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಎಂಬತ್ತು ಅಡಿರಸ್ತೆಯಲ್ಲಿನ ಮೆಡಿಕಲ್ ಶಾಪ್ ಬಳಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ.ಆತನನ್ನು ಬಂಧಿಸಿದ ಪೊಲೀಸರು ಠಾಣೆಗೆ ಕರೆದೊಯ್ಯುತ್ತಿದ್ದ ವೇಳೆ ಇಲ್ಲಿನ ಕೆಜಿ ಹಳ್ಳಿ ಸಮೀಪ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ.
ಗುರುವಾರ ಮಧ್ಯಾಹ್ನ ಇಲ್ಲಿನ ಹೆಣ್ಣೂರು-ಬಾಗಲೂರು ರಸ್ತೆಯಲ್ಲಿನ ಹೂವಿನನಾಯಕನ ಹಳ್ಳಿ ಕ್ರಾಸ್ ಸಮೀಪದಲ್ಲಿ ಅಡಗಿಕೊಂಡಿದ್ದ. ಈ ಸಂದರ್ಭದಲ್ಲಿ ಸಿಂಗ್ನನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾನೆ.
ಈ ವೇಳೆ ಪ್ರೇಜರ್ಟೌನ್ ಠಾಣಾ ಇನ್ಸ್ಪೆಕ್ಟರ್ ಗಿರೀಶ್ ರಕ್ಷಣೆಗಾಗಿ ಗುಂಡು ಹಾರಿಸಿದ್ದು, ಆರೋಪಿ ಸಿಂಗ್ ತಲೆಗೆ ಗುಂಡು ತಗುಲಿದೆ. ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಿಂಗ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸಿಂಗ್ ನಗರದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿ ಯಲ್ಲಿರುವ ಆಸಾಮಿಯಾಗಿದ್ದು, ಕಳವು, ದರೋಡೆ, ಕೊಲೆಯತ್ನ ಸೇರಿದಂತೆ ಈತನ ವಿರುದ್ಧ ಒಟ್ಟು 29ಕ್ಕೂ ಹೆಚ್ಚು ಮೊಕದ್ದಮೆಗಳು ದಾಖಲಾಗಿವೆ .
ಬುದ್ಧಿವಂತ ರೌಡಿ: ಎಸ್ ಎಸ್ ಎಲ್ ಸಿ ಯಲ್ಲಿ ಶೇ. 87 ಅಂಕ, ಪಿಯುಸಿಯಲ್ಲಿ ಶೇ. 73 ಅಂಕ, ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯದ ಮೂಲಕ ಎಂಬಿಎ ಮಾಡುತ್ತಿದ್ದಾಗ ಭೂಗತ ಲೋಕದ ನಂಟು ಆರಂಭವಾಯಿತು. ಬಿಹಾರದಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಮಾರಾಟ ಮಾಡತೊಡಗಿದ. 2005 ರಲ್ಲಿ ಬಂಧಿತನಾದರೂ ಜಾಮೀನು ಪಡೆದು ಹೊರಬಿದ್ದಿದ್ದ. ಇತ್ತೀಚೆಗೆ ಈತನ ಗ್ಯಾಂಗ್ ನ ಪ್ರಮುಖರನ್ನು ಮುಂಬೈ ಪೊಲೀಸರು ಬಂಧಿಸಿ 34 ಕ್ಕೂ ಅಧಿಕ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications