ಬೇಳೂರು ಗೋಪಾಲಕೃಷ್ಣಂಗೆ ಮಂತ್ರಿ ಪಟ್ಟ ಬೇಕಂತೆ

"ನನಗೆ ಮಂತ್ರಿಯಾಗಲು ತನಗೆ ಎಲ್ಲ ರೀತಿಯ ಅರ್ಹತೆಯಿದೆ. ಖಾತೆ ನಿರ್ವಹಣೆ ಮಾಡುವ ಸಾಮರ್ಥ್ಯವಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ತನಗೆ ಮಂತ್ರಿ ಸ್ಥಾನ ನೀಡಲೇ ಬೇಕು. ಒಂದು ವೇಳೆ ನೀಡದಿದ್ದರೆ ಮುಂದಿನ ದಾರಿ ಗೊತ್ತಿದೆ...! " ಎಂದು ಬಹಿರಂಗ ಎಚ್ಚರಿಕೆ ನೀಡಿರುವ ಬೇಳೂರು, ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕರೆ ಯಾವ ತ್ಯಾಗಕ್ಕೆ ಬೇಕಾದರೂ ರೆಡಿ ಎಂದಿದ್ದಾರೆ.
ಗೋಪಾಲಕೃಷ್ಣ ಲೆಕ್ಕಾಚಾರ: ಶಿವಮೊಗ್ಗ, ಸಾಗರ ಕಡೆಯಲ್ಲಿ ಬಿಜೆಪಿ ಅಲೆ ಏಳಲು ಹಾಗೂ ಮುಖ್ಯಮಂತ್ರಿಗಳ ಮಗ ಬಿವೈ ರಾಘವೇಂದ್ರ ಸಂಸದರಾಗಲು ತಾವು ಹಾಗೂ ತಮ್ಮ ಬೆಂಬಲಿಗರು ಸಾಕಷ್ಟು ಬೆವರು ಹರಿಸಿದ್ದೇವೆ. ಹರತಾಳು ಹಾಲಪ್ಪಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಈಡಿಗ ಸಮುದಾಯಕ್ಕೆ ಸಂಪುಟದಲ್ಲಿ ಯಾವುದೇ ರೀತಿಯ ಸ್ಥಾನಮಾನ ಸಿಕ್ಕಿಲ್ಲ. ಶಿವಮೊಗ್ಗ ಜಿಲ್ಲೆಯ ಈಡಿಗ ಸಮುದಾಯದವರ ಬೆಂಬಲ ಹೀಗೆ ಸ್ಥಿರವಾಗಿರಬೇಕಾದರೆ ನಾನು ಮಂತ್ರಿಯಾಗಲೇ ಬೇಕು.
ಈಗೇನಾದರೂ ಈಡಿಗ ಸಮುದಾಯವನ್ನು ಕಡೆಗಾಣಿಸಿದರೆ, ಅದೇ ಸಮುದಾಯದ ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರು ಲಾಭ ಪಡೆಯುವುದು ಗ್ಯಾರಂಟಿ. ಶಿವಮೊಗ್ಗದಲ್ಲಿ ಈಡಿಗರ ಬೆಂಬಲ ಸಿಕ್ಕರೆ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಕಾರವಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರಾಬಲ್ಯ ಮುಂದುವರೆಸಬಹುದು.
ಸಚಿವರಾಗಿ ಏನು ಮಾಡುತ್ತೀರಾ ಎಂದರೆ ಮೊದಲು ಮಂತ್ರಿ ಮಾಡಲಿ ಮುಂದಿನದು ಆಮೇಲೆ ಎಂದು ಜಾರಿಕೊಂಡರು.ಈಡಿಗ ಸಮುದಾಯದ ಬೇರೆ ಶಾಸಕರಿಗೆ ಮಂತ್ರಿ ಪದವಿ ನೀಡುವ ಚಾನ್ಸ್ ಇಲ್ಲ. ನನ್ನ ಬಳಿ ಹಲವಾರು ಶಾಸಕರಿದ್ದಾರೆ ಎಂದರು. ಆದರೆ, ಸಂಖ್ಯೆಯನ್ನು ಸ್ಪಷ್ಟಪಡಿಸಲಿಲ್ಲ.
ಹಾಲಪ್ಪ ಅಭಿಮಾನಿಗಳ ಕಿಡಿ: ಆವೇಶದ ಬರದಲ್ಲಿ ಹಾಲಪ್ಪ ಅವರನ್ನು ಟೀಕಿಸಿರುವ ಗೋಪಾಲಕೃಷ್ಣ ಅವರು ಹಾಲಪ್ಪ ಪ್ರಕರಣದಲ್ಲಿ ತಮ್ಮ ಕೈವಾಡವಿಲ್ಲ ಎಂದಿರುವುದನ್ನು ಸಹಿಸಿಕೊಳ್ಳಬಹುದು ಆದರೆ, ಹಾಲಪ್ಪ ನವರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎನ್ನುವುದು ಸರಿಯಿಲ್ಲ ಎಂದು ಹಾಲಪ್ಪ ಅವರ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications