ಧರ್ಮಸ್ಥಳ ಮಂಜುನಾಥನಿಗೆ ಇ- ಕಾಣಿಕೆ ಸಲ್ಲಿಸಿ

ಕಾರ್ಪೋರೇಶನ್ ಬ್ಯಾಂಕ್ ರೂಪಿಸಿರುವ, ಅಂತರ್ಜಾಲ ಮೂಲಕ ಸಲ್ಲಿಸುವ ಇ ಕಾಣಿಕೆ ಸೇವೆಯನ್ನು ಉದ್ಘಾಟಿಸಿದ ಹೆಗ್ಗಡೆ, ಆಧುನಿಕತೆಯ ಪರಿಣಾಮ ನಾವಿಂದು ನಮ್ಮ ಹಣಕಾಸಿನ ವ್ಯವಹಾರಗಳನ್ನು ಮನೆಯಲ್ಲೇ ಕುಳಿತು ಮಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ವಿದೇಶಗಳಲ್ಲಿದ್ದ ತಾಂತ್ರಿಕತೆ ನಗರಕ್ಕೆ ಬಂದಿದ್ದು ಇದೀಗ ಗ್ರಾಮೀಣ ಪ್ರದೇಶಕ್ಕೂ ಕಾಲಿರಿಸಿದೆ. ದೇಶದ ಪ್ರಗತಿ ನಗರಗಳಿಂದ ಮಾತ್ರವಲ್ಲ ಗ್ರಾಮೀಣ ಪ್ರದೇಶದಿಂದಲೂ ಸಾಧ್ಯ ಎಂಬುದನ್ನು ತಾಂತ್ರಿಕತೆ ತೋರಿಸಿಕೊಟ್ಟಿದೆ ಎಂದರು.
ದೇವರಿಗೆ ಕಾಣಿಕೆ ಸಲ್ಲಿಸಲು ಮನಿಆರ್ಡರ್, ಡಿಡಿ ಸೌಲಭ್ಯಗಳಿವೆ ಆದರೆ ಇದೀಗ ಅದನ್ನೂ ಮೀರಿ ಅಂತರ್ಜಾಲದ ಮೂಲಕ ದೇವರಿಗೆ ಪ್ರಾರ್ಥನಾ ಕಾಣಿಕೆಯನ್ನು ಸಲ್ಲಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಪೋರೇಶನ್ ಬ್ಯಾಂಕಿನವರು ತಮ್ಮ ಸೇವೆಯನ್ನು ವಿಸ್ತರಿಸಲು ಈ ರೀತಿಯಲ್ಲಿ ಮುಂದಾಗಿರುವುದು ಸಂತಸದ ವಿಚಾರ ಎಂದರು.
ನಾವು ದೂರದ ದೂರಿಗೆ ಪ್ರಯಾಣ ಮಾಡುತ್ತಿರವಾಗ ನಮ್ಮ ಪ್ರಯಾಣ ಸುರಕ್ಷಿತವಾಗುವಂತೆ ದೇವರಲ್ಲಿ ಬೇಡಿಕೊಳ್ಳುವುದರ ಜೊತೆಗೆ ಪ್ರಯಾಣದ ಸಂದರ್ಭದಲ್ಲೇ ಇ ಮೇಲ್ ಮೂಲಕ ನಮ್ಮ ಪ್ರಾರ್ಥನಾ ಕಾಣಿಕೆಯನ್ನು ಸಲ್ಲಿಸಿ ನೆಮ್ಮದಿ ಕಾಣಬಹುದಾಗಿದೆ ಎಂದು ವಿವರಿಸಿದರು.
ಕಾರ್ಪೋರೇಶನ್ ಬ್ಯಾಂಕಿನ ಅಧ್ಯಕ್ಷ ರಾಮನಾಥ ಪ್ರದೀಪ ಮಾತನಾಡಿ, ನಮ್ಮ ಬ್ಯಾಂಕ್ ಸುಮಾರು 162 ಸಾವಿರ ಕೋಟಿ ವ್ಯವಹಾರವನ್ನು ಮಾಡುತ್ತಿದೆ. ನಮ್ಮ ಹಣಕಾಸಿನ ಪದ್ಧತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾದರಿಯಾಗಿ ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ. ನಾವು ಅಂತರ್ಜಾಲದ ಮೂಲಕ ಹಲವು ರೀತಿಯ ಸೇವೆಗಳನ್ನು ನೀಡಿ ಪ್ರಥಮದಲ್ಲಿದ್ದೇವೆ. ಇದೇ ರೀತಿ ಇ ಕಾಣಿಕೆಯೂ ಪ್ರಥಮವಾಗಿದೆ.
ಈ ವ್ಯವಸ್ಥೆಯಲ್ಲಿ ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಯಾವುದೇ ಬ್ಯಾಂಕಿನಿಂದ ಭಕ್ತರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬಹುದಾಗಿದೆ. ಈ ಸೇವೆ ದಿನದ ಇಪ್ಪತ್ತನಾಲ್ಕು ಗಂಟೆಯೂ ವಿಶ್ವದಲ್ಲಿ ಎಲ್ಲೇ ಇದ್ದರೂ ಉಪಯೋಗಿಸಿಕೊಳ್ಳಬಹುದಾಗಿದೆ. ಇದಕ್ಕೆ ಉಚಿತ ಸೇವಾ ಶುಲ್ಕವಿರುತ್ತದೆ ಎಂದು ವಿವರಿಸಿದರು.
ಹೆಚ್ಚಿನ ವಿವರಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ವೆಬ್ ತಾಣ ವೀಕ್ಷಿಸಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications