ಧರ್ಮಸ್ಥಳ ಮಂಜುನಾಥನಿಗೆ ಇ- ಕಾಣಿಕೆ ಸಲ್ಲಿಸಿ

ಕಾರ್ಪೋರೇಶನ್ ಬ್ಯಾಂಕ್ ರೂಪಿಸಿರುವ, ಅಂತರ್ಜಾಲ ಮೂಲಕ ಸಲ್ಲಿಸುವ ಇ ಕಾಣಿಕೆ ಸೇವೆಯನ್ನು ಉದ್ಘಾಟಿಸಿದ ಹೆಗ್ಗಡೆ, ಆಧುನಿಕತೆಯ ಪರಿಣಾಮ ನಾವಿಂದು ನಮ್ಮ ಹಣಕಾಸಿನ ವ್ಯವಹಾರಗಳನ್ನು ಮನೆಯಲ್ಲೇ ಕುಳಿತು ಮಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ವಿದೇಶಗಳಲ್ಲಿದ್ದ ತಾಂತ್ರಿಕತೆ ನಗರಕ್ಕೆ ಬಂದಿದ್ದು ಇದೀಗ ಗ್ರಾಮೀಣ ಪ್ರದೇಶಕ್ಕೂ ಕಾಲಿರಿಸಿದೆ. ದೇಶದ ಪ್ರಗತಿ ನಗರಗಳಿಂದ ಮಾತ್ರವಲ್ಲ ಗ್ರಾಮೀಣ ಪ್ರದೇಶದಿಂದಲೂ ಸಾಧ್ಯ ಎಂಬುದನ್ನು ತಾಂತ್ರಿಕತೆ ತೋರಿಸಿಕೊಟ್ಟಿದೆ ಎಂದರು.
ದೇವರಿಗೆ ಕಾಣಿಕೆ ಸಲ್ಲಿಸಲು ಮನಿಆರ್ಡರ್, ಡಿಡಿ ಸೌಲಭ್ಯಗಳಿವೆ ಆದರೆ ಇದೀಗ ಅದನ್ನೂ ಮೀರಿ ಅಂತರ್ಜಾಲದ ಮೂಲಕ ದೇವರಿಗೆ ಪ್ರಾರ್ಥನಾ ಕಾಣಿಕೆಯನ್ನು ಸಲ್ಲಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಪೋರೇಶನ್ ಬ್ಯಾಂಕಿನವರು ತಮ್ಮ ಸೇವೆಯನ್ನು ವಿಸ್ತರಿಸಲು ಈ ರೀತಿಯಲ್ಲಿ ಮುಂದಾಗಿರುವುದು ಸಂತಸದ ವಿಚಾರ ಎಂದರು.
ನಾವು ದೂರದ ದೂರಿಗೆ ಪ್ರಯಾಣ ಮಾಡುತ್ತಿರವಾಗ ನಮ್ಮ ಪ್ರಯಾಣ ಸುರಕ್ಷಿತವಾಗುವಂತೆ ದೇವರಲ್ಲಿ ಬೇಡಿಕೊಳ್ಳುವುದರ ಜೊತೆಗೆ ಪ್ರಯಾಣದ ಸಂದರ್ಭದಲ್ಲೇ ಇ ಮೇಲ್ ಮೂಲಕ ನಮ್ಮ ಪ್ರಾರ್ಥನಾ ಕಾಣಿಕೆಯನ್ನು ಸಲ್ಲಿಸಿ ನೆಮ್ಮದಿ ಕಾಣಬಹುದಾಗಿದೆ ಎಂದು ವಿವರಿಸಿದರು.
ಕಾರ್ಪೋರೇಶನ್ ಬ್ಯಾಂಕಿನ ಅಧ್ಯಕ್ಷ ರಾಮನಾಥ ಪ್ರದೀಪ ಮಾತನಾಡಿ, ನಮ್ಮ ಬ್ಯಾಂಕ್ ಸುಮಾರು 162 ಸಾವಿರ ಕೋಟಿ ವ್ಯವಹಾರವನ್ನು ಮಾಡುತ್ತಿದೆ. ನಮ್ಮ ಹಣಕಾಸಿನ ಪದ್ಧತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾದರಿಯಾಗಿ ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ. ನಾವು ಅಂತರ್ಜಾಲದ ಮೂಲಕ ಹಲವು ರೀತಿಯ ಸೇವೆಗಳನ್ನು ನೀಡಿ ಪ್ರಥಮದಲ್ಲಿದ್ದೇವೆ. ಇದೇ ರೀತಿ ಇ ಕಾಣಿಕೆಯೂ ಪ್ರಥಮವಾಗಿದೆ.
ಈ ವ್ಯವಸ್ಥೆಯಲ್ಲಿ ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಯಾವುದೇ ಬ್ಯಾಂಕಿನಿಂದ ಭಕ್ತರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬಹುದಾಗಿದೆ. ಈ ಸೇವೆ ದಿನದ ಇಪ್ಪತ್ತನಾಲ್ಕು ಗಂಟೆಯೂ ವಿಶ್ವದಲ್ಲಿ ಎಲ್ಲೇ ಇದ್ದರೂ ಉಪಯೋಗಿಸಿಕೊಳ್ಳಬಹುದಾಗಿದೆ. ಇದಕ್ಕೆ ಉಚಿತ ಸೇವಾ ಶುಲ್ಕವಿರುತ್ತದೆ ಎಂದು ವಿವರಿಸಿದರು.
ಹೆಚ್ಚಿನ ವಿವರಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ವೆಬ್ ತಾಣ ವೀಕ್ಷಿಸಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications