ಶುಭಾ ಕೇಸ್ ಸಹವಾಸ ಸಾಕು :ಜಡ್ಜ್ ಶ್ರೀಧರ್

ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್ನ ವಿಭಾಗೀಯ ಪೀಠದ ನ್ಯಾಯಮೂರ್ತಿ ಕರಣಂ ಶ್ರೀಧರರಾವ್, ವಿರುದ್ಧ ಸೆ.8 ರಂದು ಅನಾಮಧೇಯ ಕರಪತ್ರವೊಂದನ್ನು ಹಂಚಲಾಗಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ಮುಜುಗರಕ್ಕೆ ಒಳಗಾಗಿದ್ದ ನ್ಯಾ. ಶ್ರೀಧರ್ರಾವ್ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
22 ವರ್ಷಗಳ ಕಾಲ ನ್ಯಾಯಾಂಗ ಸೇವೆ ಸಲ್ಲಿಸಿದ್ದು, 27 ಸಾವಿರಕ್ಕೂ ಅಧಿಕ ಪ್ರಕರಣಗಳ ವಿಚಾರಣೆ ನಡೆಸಿದ್ದೇನೆ. ಆದರೆ, ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಬಂದಿರುವುದು ಖೇದಕರ ಸಂಗತಿ ಎಂದು ನ್ಯಾ.ಶ್ರೀಧರ್ರಾವ್ ವಿಷಾದ ವ್ಯಕ್ತಪಡಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ . ನನ್ನ ಮೇಲೆ ಯಾವುದೇ ಒತ್ತಡಗಳಿಲ್ಲ ಎಂದುಹೇಳಿದರು.
ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ನ ಕೋಟ್ ಹಾಲ್-3 ರಲ್ಲಿ ವಿಭಾಗೀಯ ಪೀಠದ ನ್ಯಾ.ಶ್ರೀಧರ್ರಾವ್ ಮತ್ತು ಬಿ.ವಿ.ಪಿಂಟೋ ಅವರಿದ್ದ ವಿಭಾಗೀಯ ಪೀಠ ನಡೆಸುತ್ತಿತ್ತು. ಇದೇ ಸಂದರ್ಭದಲ್ಲಿ ಅನಾಮಧೇಯ ಕರಪತ್ರವೊಂದನ್ನು ಹಂಚಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದಾರೆ.
2003ರ ಡಿಸೆಂಬರ್ 3ರಂದು ಸಾಫ್ಟ್ ವೇರ್ ಎಂಜಿನಿಯರ್ ಗಿರೀಶ್ ಹತ್ಯೆ ನಡೆದಿತ್ತು. ಗಿರೀಶ್ರ ಭಾವಿಪತ್ನಿ ಶುಭಾ ಕೊಲೆಯ ಪ್ರಮುಖ ಆರೋಪಿಯಾಗಿದ್ದಳು. ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ನ್ಯಾಯಾಲಯ ಶುಭಾ ಸೇರಿದಂತೆ ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಆದರೆ, ಶುಭಾ ಶಿಕ್ಷೆ ವಜಾಗೊಳಿಸಲು ಕೋರಿ ಆಕೆ ಪರ ವಕೀಲ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications