ಪದವಿಪೂರ್ವ ಪರೀಕ್ಷಾ ಮಂಡಳಿ ಸ್ಥಾಪನೆ : ಕಾಗೇರಿ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಇದುವರೆಗೆ ರಾಜ್ಯ ಪದವಿ ಪೂರ್ವ ಶಿಕ್ಷಣ ಮಂಡಳಿಯಲ್ಲಿದ್ದ ಪರೀಕ್ಷಾ ವಿಭಾಗ, ಈ ಪರೀಕ್ಷೆಗಳನ್ನು ನಡೆಸುತ್ತಿದ್ದವು. ಇದೀಗ ರಾಜ್ಯ ಸರಕಾರ ಪಿಯುಸಿ ಪರೀಕ್ಷೆಗಳಿಗಾಗಿ ಹೊಸದಾಗಿ ಪದವಿಪೂರ್ವ ಪರೀಕ್ಷಾ ಮಂಡಳಿಯನ್ನು ಆರಂಭಿಸಿದ್ದು, ಈ ವರ್ಷದ ಪರೀಕ್ಷೆಗಾಗಿ ಅದು ಈಗಾಗಲೇ ಸಿದ್ಧತೆ ಆರಂಭಿಸಿದೆ ಎಂದರು.
ರಾಜ್ಯದ ಪ್ರಾಥಮಿಕ ಶಿಕ್ಷಣ ಇಲಾಖೆ ಈ ವರ್ಷವನ್ನು ಸ್ಪಷ್ಟ ಓದು, ಶುದ್ಧ ಬರಹ ಸಾಮರ್ಥ್ಯ ವಿಕಾಸ ವರ್ಷವನ್ನಾಗಿ ಆಚರಿಸುತ್ತಿದೆ. ಮಕ್ಕಳ ಓದು ಮತ್ತು ಬರಹವನ್ನು ಸ್ಪಷ್ಟ ಮತ್ತು ಸುಂದರಗೊಳಿಸಲು ಶಿಕ್ಷಕರಿಗೆ ವಿಶೇಷ ಸೂಚನೆಗಳನ್ನು ನೀಡಲಾಗಿದೆ ಎಂದರು.
ಮಕ್ಕಳಲ್ಲಿ ಓದುವ ಬರೆಯುವ ಸಾಮರ್ಥ್ಯ ಹೆಚ್ಚಿಸುವ ಬಗ್ಗೆ ಶಿಕ್ಷಕರಿಗೆ ವಿಶೇಷ ಮಾಹಿತಿ ನೀಡಲಾಗಿದೆ. ಶಿಕ್ಷಕರು ಈ ನಿಟ್ಟಿನಲ್ಲಿ ನಡೆಸುವ ಪ್ರಯತ್ನದ ಮೇಲೆ ನಿಗಾ ಇರಿಸಲು ಬಿಆರ್ ಸಿ ಹಾಗೂ ಸಿಆರ್ ಸಿಗಳಲ್ಲದೇ ಡಯಟ್ ನ ಹಿರಿಯ ಅಧ್ಯಾಪಕರಿಗೆ ಜವಾಬ್ದಾರಿ ವಹಿಸಲಾಗಿದೆ. ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದಿದ್ದಲ್ಲಿ ಅಥವಾ ಕೊರತೆ ಕಂಡು ಬಂದಲ್ಲಿ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಇಲಾಖೆಗೆ ತಿಳಿಸಲಾಗಿದೆ ಎಂದು ಕಾಗೇರಿ ವಿವರಿಸಿದರು.