ವಿದ್ಯಾರ್ಥಿ ಕೊಲೆ : ಇಬ್ಬರು ಯುವಕರ ಬಂಧನ

ಬುಧವಾರ ಬುಲ್ಟೆಂಪಲ್ ರಸ್ತೆಯ ಉದಯಭಾನು ಮೈದಾನದ ಬಳಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಮನೋಜ್ ಎಂಬುವನನ್ನು ಜಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಹಳ್ಳಿಯ ನಿವಾಸಿ ವಿನಯ್ ಅಲಿಯಾಸ್ ಕರಿಯ (18) ಮತ್ತು ಲೋಕೇಶ್ ಅಲಿಯಾಸ್ ಶರತ್ (22)ರನ್ನು ಬಂಧಿಸಲಾಗಿದೆ.
ಮನೋಜ್ ಎಂಬವನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇದೇ ಯುವತಿಯನ್ನು ಆರೋಪಿ ಶರತ್ ಸಹ ಪ್ರೇಮಿಸುತ್ತಿದ್ದ. ಈ ವಿಷಯಕ್ಕಾಗಿ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು. ಮನೋಜ್ ಪ್ರೀತಿಸುತ್ತಿದ್ದ ಯುವತಿಯ ತಂಟೆಗೆ ಹೋಗದಂತೆ ಆರೋಪಿಗಳು ಹೆದರಿಸುತ್ತಿದ್ದರು.
ಇದಕ್ಕೆ ಕೇರ್ ಮಾಡದ ಮನೋಜ್ನನ್ನು ಹೆದರಿಸಲು ಬುಧವಾರ ಇಬ್ಬರು ಆರೋಪಿಗಳು ಬೈಕ್ನಲ್ಲಿ ಬಂದು ಮನೋಜ್ಗೆ ಹೆದರಿಸಿದ್ದಾರೆ. ಮಾತಿನ ಚಕಮಕಿ ನಡುವೆ ಆರೋಪಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ತೆಯಾಗಿದ್ದು ಹೀಗೆ? :ಆರೋಪಿಗಳಿಗೆ ಮೊದಲಿನಿಂದಲೂ ಬಾರ್ ಗರ್ಲ್ಸ್ಳೊಬ್ಬಳ ಸ್ನೇಹವಿತ್ತು. ಕೊಲೆ ನಡೆದಾಗ ಆರೋಪಿಗಳಿಬ್ಬರು ಜ್ಞಾನಭಾರತಿ ಪೊಲೀಸ್ ಠಾಣೆಯ ಅಂಬೇಡ್ಕರ್ ಕಾಲೋನಿಯಲ್ಲಿ ತಂಗಿದ್ದರು. ಈ ಸಮಯದಲ್ಲಿ ತಮ್ಮ ಸ್ನೇಹಿತೆ ಬಾರ್ಗರ್ಲ್ಸ್ಗೆ ಎಸ್ಎಂಎಸ್ ಮೇಸೆಜ್ ಮಾಡಿ, ತಾವು ಕೇರಳಕ್ಕೆ ಹೋಗುತ್ತಿದ್ದು, 6 ತಿಂಗಳು ಬರುವುದಿಲ್ಲವೆಂದು ಮೊಬೈಲ್ನಲ್ಲಿ ಸಂದೇಶ ಕಳಿಸಿದ್ದರು.
ಇದಕ್ಕೆ ಪ್ರತಿಯಾಗಿ ಬಾರ್ ಗರ್ಲ್ಸ್ ಸಹ ಪ್ರತಿಕ್ರಿಯೆ ನೀಡಿದ್ದರೂ ಆರೋಪಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣವೇ ಎಚ್ಚೆತ್ತುಕೊಂಡ ಕೆ.ಜಿ.ನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿಗಳು ಮೈಸೂರು ಮೂಲಕ ಕೇರಳಕ್ಕೆ ತೆರಳುವ ಮುನ್ನ ಬಂಧಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications