ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪಂಡಿತ ಪುಟ್ಟರಾಜ ಗವಾಯಿ ಗಾನಗಂಗೆಯಲ್ಲಿ ಲೀನ
ಕಳೆದ ಹಲವು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಸೋಮವಾರ ತೀವ್ರ ಅನಾರೋಗ್ಯಕ್ಕೆ ಒಳಗಾದ ಅವರನ್ನು ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದರಿಂದ ಅವರ ಅಶಯದಂತೆ ಗದಗಿನ ವೀರೇಶ್ವರ ಆಶ್ರಮಕ್ಕೆ ಕರೆದುಕೊಂಡು ಬರಲಾಗಿತ್ತು.
ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿತು. ತಕ್ಷಣ ಆಶ್ರಮಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಚೆನ್ನಶೆಟ್ಟಿ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನಡೆಸಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಲಿಂಗೈಕ್ಯರಾಗಿರುವುದನ್ನು ಚೆನ್ನಶೆಟ್ಟಿ ಖಚಿತಪಡಿಸಿದ್ದಾರೆ. ಜಗತ್ತಿನಾದ್ಯಂತ ಇರುವ ಅವರ ಕೋಟ್ಯಂತರ ಭಕ್ತರಿಗೆ ಶ್ರೀಗಳ ನಿಧನದ ಸುದ್ದಿ ತೀವ್ರ ಆಘಾತ ಉಂಟು ಮಾಡಿದೆ. ಮಠದಲ್ಲಿ ಶೋಕಸಾಗರ ಮನೆ ಮಾಡಿದೆ.
Comments
Story first published: Saturday, September 18, 2010, 12:49 [IST]