ಪ್ರತಿಭಾ ಕೊಲೆ ಪ್ರಕರಣ ತೀರ್ಪುಮುಂದೂಡಿಕೆ

ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿ ಶಿವಕುಮಾರನನ್ನು ಇಂದು ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ಐದಾರು ನಿಮಿಷ ದಲ್ಲೇಕೋರ್ಟ್ ಕಲಾಪ ಮುಗಿಯಿತು. ಈ ಪ್ರಕರಣದಲ್ಲಿ ಇನ್ನಷ್ಟು ಸ್ಪಷ್ಟೀಕರಣ ಬೇಕ್ಕಿದೆ ಎಂದು ಹೇಳಿದ ನ್ಯಾಯಾಧೀಶ ಬಿ.ಬಿ.ಗುದಲಿ ಅವರು ಸೆ.27ಕ್ಕೆ ತೀರ್ಪು ನೀಡುವುದಾಗಿ ಹೇಳಿದರು.
ಪ್ರತಿಭಾ ಕೇಸ್ ಹಿಸ್ಟರಿ: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಎಚ್ಪಿ ಗ್ಲೋಬಲ್ ಕಾಲ್ ಸೆಂಟರ್ ಉದ್ಯೋಗಿಯಾಗಿದ್ದ ಪ್ರತಿಭಾ ಶ್ರೀಕಂಠಯ್ಯ ಅವರನ್ನು 2005 ಡಿ.13 ರಂದು ರಾತ್ರಿ ಎಸ್ಎರ್ಎಸ್ ಕ್ಯಾಬ್ ಡ್ರೈವರ್ ಶಿವಕುಮಾರ ಅತ್ಯಾಚಾರ ಎಸೆಗಿ ಕೊಲೆ ಮಾಡಿದ್ದನು.
ಮರುದಿನ ಕನಕಪುರ ರಸ್ತೆಯ ಪೊದೆಯೊಂದರಲ್ಲಿ ಪ್ರತಿಭಾ ಶವ ಪತ್ತೆಯಾಗಿತ್ತು. ಈ ಪ್ರಕರಣ ಇಡೀ ದೇಶದ ಐಟಿ ಕ್ಷೇತ್ರವನ್ನು ತಲ್ಲಣಗೊಳಿಸಿತ್ತು. ಎಂದಿನಂತೆ ಪ್ರತಿಭಾಳನ್ನು ಕಾಲ್ಸೆಂಟರ್ಗೆ ಕರೆದುಕೊಂಡು ಹೋಗಲು ಬರುತ್ತಿದ್ದ ಜಗದೀಶ ಬದಲಿಗೆ ಶಿವಕುಮಾರ ಎಂಬುವನು ಬಂದಿದ್ದನು. ಶಿವಕುಮಾರಗೆ ಜ್ವರವಿದೆ ಎಂದು ನಂಬಿಸಿ ಆಕೆಯನ್ನು ಕುಮಾರಸ್ವಾಮಿ ಲೇಔಟ್ ಬಳಿಯ ಅಂಜನಾಪುರದ ನಿರ್ಜನ ಬಡಾವಣೆಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಬೆದರಿಸಿ ಅತ್ಯಾಚಾರ ಎಸೆಗಿದ್ದನು.
ನಂತರ ತನ್ನ ವಿರುದ್ದ ದೂರು ನೀಡಬಹುದೆಂದು ಭಾವಿಸಿ ಆಕೆಯನ್ನು ಕೊಲೆ ಮಾಡಿ, ಕನಕಪುರ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ಎಸೆದು ಹೋಗಿದ್ದನು. ದಕ್ಷಿಣ ವಿಭಾಗದ ಅಂದಿನ ಡಿಸಿಪಿ ಆಗಿದ್ದ ಅಲೋಕ್ಕುಮಾರ್ ಹಾಗೂ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ದೇವಯ್ಯ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದರು.
ಪ್ರತಿದಿನ ಕ್ಯಾಬ್ ಓಡಿಸುವ ಜಗದೀಶನನ್ನು ವಿಚಾರಣೆ ಮಾಡಿದಾಗ ಶಿವಕುಮಾರನ ಹೆಸರು ಕೇಳಿ ಬಂದಿತ್ತು. ಆತನನ್ನು ಬಂಧಿಸಿದಾಗ ಅತ್ಯಾಚಾರ ವಿಷಯ ಬೆಳಕಿಗೆ ಬಂದಿತ್ತು ನ್ಯಾಯಾಧೀಶರ ಬದಲಾವಣೆ ಪ್ರಕರಣದ ಸೂಕ್ಷ್ಮತೆಯನ್ನು ಅರಿತಿದ್ದ ಅಂದಿನ ಡಿಸಿಪಿ ಅಲೋಕ್ಕುಮಾರ್ ಎರಡು ತಿಂಗಳಲ್ಲಿ ನ್ಯಾಯಾಲಯಕ್ಕೆ ಶಿವಕುಮಾರ ವಿರುದ್ದ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಡಿಎನ್ ಎ ಪರೀಕ್ಷೆ ಮೂಲಕ ಕೂಡಾ ಶಿವಕುಮಾರ ಮೇಲಿನ ಅರೋಪ ದೃಢಪಟ್ಟಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications