ಪ್ರತಿಭಾ ಕೊಲೆ ಪ್ರಕರಣ ತೀರ್ಪುಮುಂದೂಡಿಕೆ

ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿ ಶಿವಕುಮಾರನನ್ನು ಇಂದು ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ಐದಾರು ನಿಮಿಷ ದಲ್ಲೇಕೋರ್ಟ್ ಕಲಾಪ ಮುಗಿಯಿತು. ಈ ಪ್ರಕರಣದಲ್ಲಿ ಇನ್ನಷ್ಟು ಸ್ಪಷ್ಟೀಕರಣ ಬೇಕ್ಕಿದೆ ಎಂದು ಹೇಳಿದ ನ್ಯಾಯಾಧೀಶ ಬಿ.ಬಿ.ಗುದಲಿ ಅವರು ಸೆ.27ಕ್ಕೆ ತೀರ್ಪು ನೀಡುವುದಾಗಿ ಹೇಳಿದರು.
ಪ್ರತಿಭಾ ಕೇಸ್ ಹಿಸ್ಟರಿ: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಎಚ್ಪಿ ಗ್ಲೋಬಲ್ ಕಾಲ್ ಸೆಂಟರ್ ಉದ್ಯೋಗಿಯಾಗಿದ್ದ ಪ್ರತಿಭಾ ಶ್ರೀಕಂಠಯ್ಯ ಅವರನ್ನು 2005 ಡಿ.13 ರಂದು ರಾತ್ರಿ ಎಸ್ಎರ್ಎಸ್ ಕ್ಯಾಬ್ ಡ್ರೈವರ್ ಶಿವಕುಮಾರ ಅತ್ಯಾಚಾರ ಎಸೆಗಿ ಕೊಲೆ ಮಾಡಿದ್ದನು.
ಮರುದಿನ ಕನಕಪುರ ರಸ್ತೆಯ ಪೊದೆಯೊಂದರಲ್ಲಿ ಪ್ರತಿಭಾ ಶವ ಪತ್ತೆಯಾಗಿತ್ತು. ಈ ಪ್ರಕರಣ ಇಡೀ ದೇಶದ ಐಟಿ ಕ್ಷೇತ್ರವನ್ನು ತಲ್ಲಣಗೊಳಿಸಿತ್ತು. ಎಂದಿನಂತೆ ಪ್ರತಿಭಾಳನ್ನು ಕಾಲ್ಸೆಂಟರ್ಗೆ ಕರೆದುಕೊಂಡು ಹೋಗಲು ಬರುತ್ತಿದ್ದ ಜಗದೀಶ ಬದಲಿಗೆ ಶಿವಕುಮಾರ ಎಂಬುವನು ಬಂದಿದ್ದನು. ಶಿವಕುಮಾರಗೆ ಜ್ವರವಿದೆ ಎಂದು ನಂಬಿಸಿ ಆಕೆಯನ್ನು ಕುಮಾರಸ್ವಾಮಿ ಲೇಔಟ್ ಬಳಿಯ ಅಂಜನಾಪುರದ ನಿರ್ಜನ ಬಡಾವಣೆಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಬೆದರಿಸಿ ಅತ್ಯಾಚಾರ ಎಸೆಗಿದ್ದನು.
ನಂತರ ತನ್ನ ವಿರುದ್ದ ದೂರು ನೀಡಬಹುದೆಂದು ಭಾವಿಸಿ ಆಕೆಯನ್ನು ಕೊಲೆ ಮಾಡಿ, ಕನಕಪುರ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ಎಸೆದು ಹೋಗಿದ್ದನು. ದಕ್ಷಿಣ ವಿಭಾಗದ ಅಂದಿನ ಡಿಸಿಪಿ ಆಗಿದ್ದ ಅಲೋಕ್ಕುಮಾರ್ ಹಾಗೂ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ದೇವಯ್ಯ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದರು.
ಪ್ರತಿದಿನ ಕ್ಯಾಬ್ ಓಡಿಸುವ ಜಗದೀಶನನ್ನು ವಿಚಾರಣೆ ಮಾಡಿದಾಗ ಶಿವಕುಮಾರನ ಹೆಸರು ಕೇಳಿ ಬಂದಿತ್ತು. ಆತನನ್ನು ಬಂಧಿಸಿದಾಗ ಅತ್ಯಾಚಾರ ವಿಷಯ ಬೆಳಕಿಗೆ ಬಂದಿತ್ತು ನ್ಯಾಯಾಧೀಶರ ಬದಲಾವಣೆ ಪ್ರಕರಣದ ಸೂಕ್ಷ್ಮತೆಯನ್ನು ಅರಿತಿದ್ದ ಅಂದಿನ ಡಿಸಿಪಿ ಅಲೋಕ್ಕುಮಾರ್ ಎರಡು ತಿಂಗಳಲ್ಲಿ ನ್ಯಾಯಾಲಯಕ್ಕೆ ಶಿವಕುಮಾರ ವಿರುದ್ದ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಡಿಎನ್ ಎ ಪರೀಕ್ಷೆ ಮೂಲಕ ಕೂಡಾ ಶಿವಕುಮಾರ ಮೇಲಿನ ಅರೋಪ ದೃಢಪಟ್ಟಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications