ಗಾನಯೋಗಿ ನಿಧನಕ್ಕೆ 3ಜಿಲ್ಲೆಗೆ ಮಾತ್ರ ರಜೆ?

ವಿಶ್ವಮಾನ್ಯರಾಗಿ ಆದರ್ಶ ಜೀವನ ನಡೆಸಿದ ಗಾನಯೋಗಿಗೆ ಸಲ್ಲಬೇಕಾದ ಸೂಕ್ತ ಗೌರವವನ್ನು ಸರಕಾರ ನೀಡಲಿಲ್ಲ ಎನ್ನುವುದು ಕೋಟ್ಯಂತರ ಅಭಿಮಾನಿಗಳ ನೋವಿನ ಸಂಗತಿಯಾಗಿದೆ. ಶ್ರೀಗಳ ನಿಧನದ ನಿಮಿತ್ತ ಎರಡು ದಿನ ರಾಜ್ಯಾದ್ಯಂತ ರಜೆ ಘೋಷಣೆ ಮಾಡಬೇಕಾಗಿತ್ತು ಎನ್ನುವುದು ಭಕ್ತರ ಅಭಿಲಾಷೆಯಾಗಿತ್ತು.
ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿಗಳ ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ನಾಡಿನ ಸಾವಿರಾರು ಅಂಧರ ಬೆಳಕಾಗಿದ್ದ ದೀಪವೊಂದು ಆರಿದ್ದು ತೀವ್ರ ನೋವನ್ನುಂಟು ಮಾಡಿದೆ. ಪುಟ್ಟರಾಜ ಗವಾಯಿಗಳು ಬರೀ ವ್ಯಕ್ತಿಯಲ್ಲ ಅವರೊಂದು ದೊಡ್ಡ ಶಕ್ತಿ. ಸಮಾಜದ ಏಳಿಗೆಗಾಗಿ ಅವರ ಮಾಡಿದ ಕೈಂಕರ್ಯಗಳು ಎಲ್ಲರಿಗೂ ಆದರ್ಶ. ಅವರ ನಿಧನ ರಾಜ್ಯಕ್ಕೆ ಭಾರಿ ನಷ್ಟವನ್ನುಂಟು ಮಾಡಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಪುಟ್ಟರಾಜ ಗವಾಯಿಗಳು ಭಾರತರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಈ ನಿಟ್ಟಿನಲ್ಲಿ ಮರಣೋತ್ತರ ಪ್ರಶಸ್ತಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲಾಗುವುದು. ರಾಜ್ಯ ಸರಕಾರ ಶ್ರೀಗಳಿಗೆ ಏನು ಮಾಡಬೇಕು ಎನ್ನುವುದನ್ನು ಚರ್ಚಿಸಲಾಗುವುದು ಎಂದು ಸಚಿವರಾದ ವಿ ಎಸ್ ಆಚಾರ್ಯ, ಬಸವರಾಜ ಬೊಮ್ಮಾಯಿ ಮತ್ತು ಸಿ ಎಂ ಉದಾಸಿ ಹೇಳಿದ್ದಾರೆ.
ಕರ್ನಾಟಕ ಒಬ್ಬ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡಿದೆ. ಜಾತಿ ಬೇಧ ಎಣಿಸದೆ ಎಲ್ಲ ಅಂಧ ಮಕ್ಕಳಿಗೆ ಸಂಗೀತ ಜ್ಞಾನ ನೀಡಿ ದಾರಿದೀಪ ಅಗಿದ್ದು ಹೆಮ್ಮೆ ಪಡುವ ವಿಷಯ. ಇಂತಹ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದು ದುಖಃ ತಂದಿದೆ ಎಂದು ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಶನಿವಾರ ಅಂತ್ಯಕ್ರಿಯೆ
ಪುಟ್ಟರಾಜ ಗವಾಯಿಗಳ ಪಾರ್ಥೀವ ಶರೀರವನ್ನು ಭಕ್ತರ ದರ್ಶನಕ್ಕೆ ನಗರದ ಕ್ರೀಡಾಂಗಣದಲ್ಲಿ ಇಡಲಾಗಿದೆ. ಶನಿವಾರ ಮಧ್ಯಾಹ್ನ 12 ಗಂಟೆಗೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಆಚಾರ್ಯ ಹೇಳಿದ್ದಾರೆ. ನಾಳೆ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಗದಗಿಗೆ ಆಗಮಿಸಲಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications