ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೂನ್ಯ ಮಾಸಕ್ಕೂ ಮುನ್ನ ಸಚಿವ ಸಂಪುಟಕ್ಕೆ ಸರ್ಜರಿ

By Rajendra
|
Google Oneindia Kannada News

Yeddyurappa
ಬೆಂಗಳೂರು, ಸೆ.18: ಬಿಜೆಪಿ ಸರಕಾರದ ಸಚಿವ ಸಂಪುಟಕ್ಕೆ ಸೆ.22ರಂದು ಮೇಜರ್ ಸರ್ಜರಿ ನಡೆಯುವುದು ಬಹುತೇಕ ಖಚಿತವಾಗಿದೆ. ಶನಿವಾರ(ಸೆ.18) ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದ್ದ್ದು ಸಚಿವ ಸಂಪುಟ ಪುನಾರಚನೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.

ಸಚಿವ ಸಂಪುಟದ ನಾಲ್ಕೈದು ಸಚಿವರ ತಲೆದಂಡಕ್ಕೆ ವೇದಿಕೆ ಸಿದ್ಧವಾಗಿದೆ. ಸಚಿವರಾದ ಎಸ್ ಎ ರವೀಂದ್ರನಾಥ್, ಲಕ್ಷ್ಮಣ ಸವದಿ, ಡಿ.ಸುಧಾಕರ್, ಶಿವನಗೌಡ ನಾಯಕ್, ಆನಂದ್ ಆಸ್ನೋಟಿಕರ್ ಅವರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಯಿದೆ. ಸಚಿವ ಸಂಪುಟಕ್ಕೆ ಹೊಸದಾಗಿ ಶೋಭಾ ಕರಂದ್ಲಾಜೆ, ವಿ ಸೋಮಣ್ಣ, ಎ ನಾರಾಯಣ ಸ್ವಾಮಿ, ಸಿ ಟಿ ರವಿ, ವಿಜಯಶಂಕರ್, ಅಪ್ಪು ಪಟ್ಟಣ್ಣ ಶೆಟ್ಟಿ ಅವರನ್ನು ಸೇರಿಸಿಕೊಳ್ಳುವ ಸಾಧ್ಯತೆಯಿದೆ.

ಚೀನಾ ಪ್ರವಾಸದಿಂದ ಮರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಸಂಘಪರಿವಾರದೊಂದಿಗೆ ಮಾತುಕತೆ ನಡೆಸಿದರು. ಸೆ.24ರ ನಂತರ ಶೂನ್ಯ ಮಾಸ ಹಾಗೂ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬೀಳಲಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸೆ.24ರ ಒಳಗೆ ಸಚಿವ ಸಂಪುಟವನ್ನು ಪುನಾರಚಿಸಲು ಬಿಜೆಪಿ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X