ಮುಗಿಲು ಮುಟ್ಟಿದ ಪುಟ್ಟಜ್ಜಯ್ಯ ಶಿಷ್ಯರ ಆಕ್ರಂದನ

ಜಿಲ್ಲಾ ಕ್ರೀಡಾಂಗಣದಿಂದ ಬೆಳಿಗ್ಗೆ 11.30ಕ್ಕೆ ಆರಂಭವಾಗಿರುವ ಮೆರವಣಿಗೆ ಊರಿನ ಬೀದಿಬೀದಿ ಸಂಚರಿಸಿ ಸಂಜೆಯ ಹೊತ್ತಿಗೆ ಪುಣ್ಯಾಶ್ರಮ ತಲುಪಲಿದೆ. ದಾರಿಯುದ್ದಕ್ಕೂ ಲಕ್ಷಾಂತರ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲು ನೆರೆದಿರುವುದು ಮತ್ತು ಶೋಕ ಸಾಗರದಂತಾಗಿರುವುದು ಪ್ರೀತಿಯ ಅಜ್ಜನ ಗೌರಿಶಿಖರದೆತ್ತರದ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ.
ಗವಾಯಿಗಳ ಶಿಷ್ಯಕೋಟಿ ಮಾತ್ರವಲ್ಲ, ಅವರನ್ನು ಬಲ್ಲ ಎಲ್ಲರೂ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಭಕ್ತಾದಿಗಳ ಆಕ್ರಂದನವಂತೂ ಮುಗಿಲು ಮುಟ್ಟಿದೆ. ಹುಯಿಲಗೋಳ ವೃತ್ತ, ಗಾಂಧಿ ವೃತ್ತ, ಜಿಲ್ಲಾ ನ್ಯಾಯಾಲಯ ಮುಖಾಂತರ ಮೆರವಣಿಗೆ ಸಾಗಿ ಪುಣ್ಯಾಶ್ರಮ ತಲುಪಲಿದೆ. ಗಾನಯೋಗಿಯ ಅಂತಿಮ ಸಂಸ್ಕಾರವನ್ನು ವೀರಶೈವ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ನೆರವೇರಿಸಲಾಗುತ್ತಿದೆ.
ಗವಾಯಿಗಳ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಗದಗಿಗೆ ಬಂದಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಅಂತಿಮ ನಮನ ಸಲ್ಲಿಸಿದರು. ಪುಟ್ಟರಾಜರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಗೆ ಶಿಫಾರಸು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಾದ್ಯಂತ ಸರಕಾರಿ ರಜಾ : ಪುಟ್ಟರಾಜರ ಗೌರವಾರ್ಥವಾಗಿ ಇಂದು ರಾಜ್ಯಾದ್ಯಂತ ಶಾಲಾ, ಕಾಲೇಜು, ಕಚೇರಿಗಳಿಗೆ ರಾಜ್ಯ ಸರಕಾರ ಗೌರವ ಘೋಷಿಸಿದೆ. ನಿನ್ನೆ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಮಾತ್ರ ರಜಾ ಘೋಷಿಸಲಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications