ಕೊಡಗಿನಲ್ಲಿ ಇಂಜೆಕ್ಷನ್ ರಿಯಾಕ್ಷನ್ ಮೂರು ಬಲಿ

ಸುಂಟಿಕೊಪ್ಪ ಪಂಪ್ಹೌಸ್ ನಿವಾಸಿ ಮೊಯ್ದು, ಕೆದಕಲ್ ನಿವಾಸಿ ಸುಶೀಲ, ಕೊಡಗರಹಳ್ಳಿ ಸ್ಕೂಲ್ಬಾಣೆ ನಿವಾಸಿ ನಬೀಸಾ, ಕಾನ್ಬೈಲ್ನ ಹರೀಶ, ಸುಂಟಿಕೊಪ್ಪದ ಉಮರ್, ಆಸಿಯಮ್ಮ, ಸಂದೀಪ್ ಅವರುಗಳು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ಶನಿವಾರ ತೆರಳಿದ್ದು, ಈ ಸಂದರ್ಭ ಪರೀಕ್ಷಿಸಿದ ಮಹಿಳಾ ವೈದ್ಯಾಧಿಕಾರಿಗಳಿಬ್ಬರು ಎನಾಫೈಲಾಸಿಸ್ ಎಂಬ ಇಂಜೆಕ್ಷನ್ ನೀಡಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಇಂಜೆಕ್ಷನ್ ಪಡೆದ ರೋಗಿಗಳು ತೀವ್ರ ಅಸ್ವಸ್ಥಗೊಂಡಿದ್ದಾರೆ.
ಅವರನ್ನು ತಕ್ಷಣ ಮಡಿಕೇರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೊಯ್ದು ಹಾಗೂ ಸುಶೀಲ ಎಂಬುವರು ಸಾವನ್ನಪ್ಪಿದರೆ, ಉಳಿದ ಐವರ ಸ್ಥಿತಿ ಗಂಭೀರಗೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಗೊಂದಲ, ಗಲಾಟೆ, ಭಯದ ವಾತಾವರಣ:ವಿಷಯ ತಿಳಿಯುತ್ತಿದ್ದಂತೆಯೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸುಂಟಿಕೊಪ್ಪ ಆಸ್ಪತ್ರೆಯ ಮುಂಭಾಗ ಜಮಾಯಿಸಿದ ಸಾರ್ವಜನಿಕರು ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಪಟ್ಟು ಹಿಡಿದರು. ಅಷ್ಟರಲ್ಲಿಯೇ ಸಂಬಂಧಿಸಿದ ವೈದ್ಯಾಧಿಕಾರಿಗಳು ಜಾಗ ಖಾಲಿ ಮಾಡಿದ್ದರು. ಈ ಸಂಬಂಧ ಪಟ್ಟಣದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಮಡಿಕೇರಿಯಲ್ಲೂ ಜನ ಜಮಾಯಿಸಿದ್ದು, ಅಧಿಕಾರಿಗಳು ಹಾಗೂ ರಾಜಕೀಯ ಪ್ರಮುಖರ ನಡುವೆ ಮಾತಿನ ಚಕಮಕಿಯೂ ನಡೆಯಿತು.
ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಭರವಸೆಗಳನ್ನು ಜಿಲ್ಲಾಧಿಕಾರಿಗಳು ನೀಡಿದ್ದರಿಂದ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಇದೇ ಸಂದರ್ಭ ಮೃತಪಟ್ಟ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಪರಿಹಾರ ವಿತರಿಸಲಾಯಿತು.
ಮತ್ತೊಂದು ಪ್ರಕರಣದಲ್ಲಿ ಕುಶಾಲನಗರದ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಪಕ್ಕದ ಮೆಡಿಕಲ್ ಶಾಪ್ನಿಂದ ತರಿಸಿ ನೀಡಿದ ಇಂಜೆಕ್ಷನ್ ರಿಯಾಕ್ಷನ್ಗೊಂಡಿದ್ದರಿಂದ ಕುಶಾಲನಗರ ನೆಹರು ಬಡಾವಣೆಯ ವಾಸು ಎಂಬುವರ ಪುತ್ರಿ ಸರಿತಾ ಎಂಬಾಕೆ ಸಾವನ್ನಪ್ಪಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ಪ್ರತಿಭಟನೆ ನಡೆಸಿದ್ದರಿಂದ ಕುಶಾಲನಗರದಲ್ಲಿ ಕೂಡ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಒಂದೇ ದಿನದಲ್ಲಿ ಮೂವರು ಸಾವನ್ನಪ್ಪಿದ್ದರಿಂದ ಇದೀಗ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ರೋಗಿಗಳು ಆಸ್ಪತ್ರೆಗೆ ತೆರಳಲು ಹಿಂಜರಿಯುವಂತಾಗಿದೆ. ಸಂಬಂಧಿಸಿದವರು ಇತ್ತ ಗಮನಹರಿಸಿ ಈ ಘಟನೆ ನಡೆಯಲು ಪ್ರಮುಖ ಕಾರಣಗಳೇನು? ವೈದ್ಯರ ನಿರ್ಲಕ್ಷ್ಯವೇ ಅಥವಾ ಔಷಧಿ ಸರಬರಾಜು ಮಾಡಿದ ಕಂಪನಿಯದ್ದೋ ಎಂಬುವುದನ್ನು ಕಂಡು ಹಿಡಿದು ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳುವ ಮೂಲಕ ಮುಂದೆ ಇಂತಹ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications