ಇನ್ಮುಂದೆ ಮುಜರಾಯಿ ದೇವಸ್ಥಾನಗಳಲ್ಲಿ ದಾಸೋಹ

ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಡಿ. ಸುಧಾಕರ್ ಶುಕ್ರವಾರ ಇಂಥದೊಂದು ಫರ್ಮಾನು ಹೊರಡಿಸಿದ್ದಾರೆ. ದೇವಾಲಯದ ಆದಾಯ ನೋಡಿಕೊಂಡು ಅನ್ನ ದಾಸೋಹ ಏರ್ಪಡಿಸುವಂತೆ ಸೂಚನೆ ಕೊಟ್ಟಿದ್ದಾರೆ. ಅಂದಹಾಗೆ ದೇವಾಲಯಗಳನ್ನು 'ಎ" ಮತ್ತು 'ಬಿ" ಶ್ರೇಣಿಗಳಲ್ಲಿ ವಿಂಗಡಿಸಲಾಗಿದೆ. ವಾರ್ಷಿಕ ಒಂದು ಕೋಟಿ ರೂ.ಗಳಿಗೆ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳು 'ಎ" ಶ್ರೇಣಿಯಲ್ಲಿದ್ದರೆ ಅದಕ್ಕೂ ಕಡಿಮೆ ವರಮಾನ ತರುವಂಥವು 'ಬಿ" ಗ್ರೇಡ್ನಲ್ಲಿ ಇರಿಸಲಾಗಿದೆ.
ಈ ದೇವಾಲಯಗಳಲ್ಲಿ ಮಾತ್ರ ಅನ್ನ ದಾಸೋಹ ಆರಂಭವಾಗಲಿದೆ. ಮೈಸೂರಿನ ಚಾಮುಂಡಿ, ನಂಜನಗೂಡಿನ ನಂಜುಂಡೇಶ್ವರ, ಕೊಳ್ಳೇಗಾಲದ ಮಲೆ ಮಹದೇಶ್ವರ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ 'ಎ" ಗ್ರೇಡ್ನಲ್ಲಿವೆ. ತೊಂದರೆ ಕೊಟ್ಟರೆ ಕ್ರಮ: ಅನ್ನ ದಾಸೋಹದ ಜತೆಗೆ ಭಕ್ತರಿಗೆ ತೊಂದರೆ ಕೊಡುವ ಹಾಗೂ ಶೋಷಣೆ ಮಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
ಅನ್ನ ದಾಸೋಹ ನಡೆಸಲು ಹಣಕಾಸು ನೆರವು ಅಗತ್ಯ. ದೇವಾಲಯದ ಆದಾಯ ಹೆಚ್ಚಿಸುವುದರ ಜತೆಗೆ ಭಕ್ತರಿಂದಲೂ ನೆರವು ಪಡೆಯುವಂತೆ ಸೂಚಿಸಲಾಗಿದೆ. ಈ ಕ್ರಮದಿಂದ ಭಕ್ತರಿಗೆ ತೃಪ್ತಿಯಾಗುತ್ತದೆ ಎಂಬ ನಂಬಿಕೆ ನನ್ನದು ಎಂದರು. ಎಲ್ಲಕ್ಕಿಂತ ಮುಖ್ಯವಾಗಿ ದೇವಾಲಯಗಳ ಆಸ್ತಿ ರಕ್ಷಣೆ ಮಾಡುವ ಸವಾಲು ಇಲಾಖೆ ಮುಂದಿದೆ.
ದೇವಾಲಯಗಳ ಆವರಣ, ಪ್ರಾಂಗಣ, ಛತ್ರ, ವಸತಿ ಗೃಹ, ಉದ್ಯಾನಗಳಲ್ಲಿ ಸ್ವಚ್ಛತೆ ಕಾಪಾಡುವುದರ ಜತೆಗೆ ಎಲ್ಲವನ್ನೂ ಸುಸ್ಥಿತಿಯಲ್ಲಿಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.
ಆಂಧ್ರ ಸಚಿವರ ಜತೆ ಚರ್ಚೆ : ತಿರುಮಲದಲ್ಲಿ 500 ಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಐದು ಕೋಟಿ ರೂ. ಈಗಾಗಲೇ ಬಿಡುಗಡೆ ಆಗಿದೆ. ಯೋಜನೆಗೆ ದೇವಾಲಯದ ಆಡಳಿತ ಮಂಡಳಿ ಅನುಮೋದನೆ ಕೊಟ್ಟಿಲ್ಲ. ಇದೀಗ ಆಡಳಿತ ಮಂಡಳಿ ವಿಸರ್ಜನೆ ಆಗಿರುವುದರಿಂದ ಆಂಧ್ರದ ಮುಜರಾಯಿ ಸಚಿವರನ್ನು ಶೀಘ್ರವೇ ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಸುಧಾಕರ್ ತಿಳಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications