ಬನ್ನೇರುಘಟ್ಟದಲ್ಲಿ ನಿಲ್ಲದ ಸಾವಿನ ಸರಣಿ

ಸತ್ತ ಮರಿಹುಲಿಯು ಗೌರಿ ಮತ್ತು ಟಿಪ್ಪುಹುಲಿಗಳ ಸಂತಾನವಾಗಿದ್ದು, ಸಾವಿಗೀಡಾದ ಮರಿಗೆ ಕೇವಲ 45 ದಿವಸಗಳು ಮಾತ್ರ ವಯಸ್ಸಾಗಿತ್ತು. ಎಲ್ಲಾ ಪ್ರಾಣಿಗಳು ಚೇತರಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಮರಿಹುಲಿ ಸತ್ತಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಆದರೆ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸರಣಿ ಸಾವಿನ ನಂತರ ನೀರಿನ ಮೂಲಗಳನ್ನು ಸ್ವಚ್ಛಗೊಳಿಸಲಾಗಿತ್ತು. ಆಹಾರವನ್ನು ವಿಶೇಷವಾಗಿ ಸಂಸ್ಕರಿಸಿ ಪ್ರಾಣಿಗಳಿಗೆ ವೈದ್ಯರ ಸಲಹೆಯಂತೆ ನೀಡಲಾಗುತ್ತಿತ್ತು. ಹೀಗಿದ್ದರೂ ಸರಣಿ ಸಾವು ಮುಂದುವರೆದಿರುವುದು ಹಲವು ಆತಂಕಗಳಿಗೆ ಎಡೆ ಮಾಡಿ ಕೊಟ್ಟಿದೆ. ಸಾವಿಗೀಡಾದ ಹುಲಿಮರಿಯನ್ನು ಹೆಬ್ಬಾಳದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ.
ಕೋಳಿ ಮಾಂಸ ಕಾರಣ?: ಇಲ್ಲಿಯವರೆಗೂ ಸಾವನ್ನಪ್ಪಿದ್ದ ಹುಲಿಗಳಿಗೆ ಕೋಳಿ ಮಾಂಸದಲ್ಲಿನ ವೈರಸ್ ಕಾರಣವಿರಬಹುದು ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಹುಲಿಗಳಿಗೆ ವಾರದಿಂದ ಕೋಳಿ ಮಾಂಸವನ್ನು ನಿಷೇಧಿಸಲಾಗಿತ್ತು.
ವೈದ್ಯರ ತೀವ್ರ ನಿಗಾದಲ್ಲಿದ್ದ ಹುಲಿ ಮರಿ ಕೋಳಿ ಮಾಂಸವನ್ನು ಸೇವಿಸದಿದ್ದರೂ ಸಾವಿಗೀಡಾಗಿದೆ. ಇದೇ ವೇಳೆ ಅನಾರೋಗ್ಯ ಪೀಡಿತ ಹುಲಿಗಳಾದ ಇಂಚರ, ಅನು, ಮಿಂಚು, ರಾಕಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯ ಡಾ.ಚೆಟ್ಟಿಯಪ್ಪ ತಿಳಿಸಿದ್ದಾರೆ.
ಎರಡು ಹುಲಿ ಹಾಗೂ ಎರಡು ಸಿಂಹಗಳನ್ನು ಕಳೆದುಕೊಂಡಿರುವ ಬನ್ನೇರುಘಟ್ಟ ಜೈವಿಕ ಕೇಂದ್ರದಲ್ಲಿ ಈಗ ಸೂತಕದ ಛಾಯೆ ಆವರಿಸಿದ್ದು, ಸಾವಿನ ಕಾರಣವನ್ನು ಹುಡುಕುವಲ್ಲಿ ಪಶುವೈದ್ಯರು ನಿರತರಾಗಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications