ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಧ್ಯಪ್ರದೇಶದಲ್ಲಿ ನುಜ್ಜುಗುಜ್ಜಾದ ರೈಲ್ವೇ ಬೋಗಿ
ಭೀಕರ ಮಳೆಯ ನಡುವೆ ಇಂದು ಮುಂಜಾನೆ ಬದರ್ವಾಸ್ ನಿಲ್ದಾಣಕ್ಕೆ ಬರುತ್ತಿದ್ದ ಗೂಡ್ಸ್ ರೈಲಿಗೆ ನಿಲ್ದಾಣದಲ್ಲಿ ನಿಂತಿದ್ದ ಇಂದೋರ್ -ಗ್ವಾಲಿಯರ್ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಕಾಣಿಸದೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು 55 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು, ಪ್ರತಿಕೂಲ ಹವಾಮಾನದ ಕಾರಣ, ಪರಿಹಾರ ಕಾರ್ಯದಲ್ಲಿ ವಿಳಂಬ ಉಂಟಾಗುತ್ತಿದೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಪ್ರತಿ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಧನವನ್ನು ರೈಲ್ವೇ ಇಲಾಖೆ ಘೋಷಿಸಿದೆ.
Story first published: Monday, September 20, 2010, 11:13 [IST]