ಎಸ್ಎಂಎಸ್ ಮೂಲಕ ಪೊಲೀಸರಿಗೆ ದೂರು ನೀಡಿ

ಈಗಾಗಲೇ ಪ್ರಾಯೋಗಿಕವಾಗಿ ಬೆಂಗಳೂರಿನ ಕಬ್ಬನ್ಪಾರ್ಕ್, ಎಸ್.ಜಿ.ಪಾರ್ಕ್ ಸೇರಿದಂತೆ ಕೆಲವು ಠಾಣೆಯಲ್ಲಿ ಸಾರ್ವಜನಿಕರು ನೀಡುವ ದೂರಿನ ಕ್ಷಣ ಕ್ಷಣದ ಮಾಹಿತಿಯ ಎಸ್ಎಂಎಸ್ ಸಂದೇಶ ರವಾನೆ ಮಾಡಲಾಗುತ್ತಿದೆ.
ದೂರು ದಾಖಲಿಸುವ ವಿಧಾನ : ಮನೆಯಲ್ಲಿ ಕಳ್ಳತನವಾದರೆ, ಇಲ್ಲವೇ ಕೊಲೆಯಾಗಿದ್ದರೆ, ತಕ್ಷಣ ಪೊಲೀಸರು ನೀಡುವ ಅಧಿಕೃತ ಮೊಬೈಲ್ ನಂಬರಿಗೆ ಘಟನೆ ಬಗ್ಗೆ ಪ್ರಾಥಮಿಕವಾಗಿ ಮಾಹಿತಿಯ ಸಂದೇಶವನ್ನು ಕಳುಹಿಸಿ, ಕಡ್ಡಾಯವಾಗಿ ಎಸ್ಎಂಎಸ್ ಸಂದೇಶದಲ್ಲಿ ನಿಮ್ಮ ಹೆಸರು, ವಿಳಾಸ ನಮೂದಾಗಿರಬೇಕು.
ಸಂದೇಶ ಸ್ವೀಕರಿಸುವ ಪೊಲೀಸರು ಸಂಬಂಧಪಟ್ಟ ಠಾಣೆಗೆ ಸಂದೇಶವನ್ನು ಇನ್ಸ್ಪೆಕ್ಟರ್ ಇಲ್ಲವೇ ಕ್ರೈಮ್ ರೈಟರ್ಗೆ ಸಂದೇಶವನ್ನು ರವಾನೆ ಮಾಡುತ್ತಿದ್ದಾರೆ.ತಕ್ಷಣ ಅದಕ್ಕೊಂದು ಕ್ರೈಮ್ ನಂಬರ್ ನೀಡಿ, ಪ್ರಕರಣ ದಾಖಲಾಗಿರು ವುದನ್ನು ದೃಢೀಕರಿಸುವ ಸಂದೇಶ ಪೊಲೀಸ್ ಇಲಾಖೆಯಿಂದ ನಿಮ್ಮ ಮೊಬೈಲ್ಗೆ ಬರುತ್ತದೆ. ಅಷ್ಟರೊಳಗಾಗಿ ಪೊಲೀಸ್ ತಂಡವೊಂದು ಘಟನಾ ಸ್ಥಳಕ್ಕೆ ಧಾವಿಸಿ ಅಪರಾಧದ ಕುರಿತು ಮಾಹಿತಿ ಸಂಗ್ರಹಿಸುತ್ತದೆ.
ಈಗಾಗಲೇ ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಎಸ್ಎಂಎಸ್ ಸಂದೇಶ ರವಾನೆ ಸಂಬಂಧ ಕಂಪ್ಯೂಟರ್ ಆಪರೇಟರ್ ಹಾಗೂ ಠಾಣೆಯ ಇನ್ಸ್ಪೆಕ್ಟರ್ ಜತೆ ಚರ್ಚೆ ನಡೆಸಲಾಗುತ್ತಿದೆ. ಇದಕ್ಕಾಗಿ ಸೂಕ್ತ ತರಬೇತಿಯನ್ನು ಸಹ ನುರಿತ ತಜ್ಞರಿಂದ ನೀಡಲಾಗುತ್ತಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.
ಸೂಚನೆ: ಸಾರ್ವಜನಿಕರು ಪೊಲೀಸರೊಂದಿಗೆ ತಮ್ಮ ಪ್ರಕರಣಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು 100 ಇಲ್ಲವೇ ಮೊಬೈಲ್ ಸಂಖ್ಯೆ 92432 58181 ಸಂಖ್ಯೆಗೆ ದೂರವಾಣಿ ಮಾಡಬಹುದಾಗಿದೆ. ಇದರ ಜೊತೆ ಎಸ್ಎಂಎಸ್ ಸಂದೇಶಗಳನ್ನು ಕಳುಹಿಸಿ ಮಾಹಿತಿ ಪಡೆಯಲು ಅವಕಾಶವನ್ನು ನೀಡಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications