ಕಿಮ್ಸ್ ನಲ್ಲಿ ಪಾನಗೋಷ್ಠಿ ತನಿಖೆಗೆ ಆಗ್ರಹ

ನಿಗಧಿಯಾಗಿದ್ದ ಕಿಮ್ಸ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದರೂ, ಪಾನಗೋಷ್ಠಿ ಏರ್ಪಡಿಸಿದ್ದರು. ಪುಟ್ಟರಾಜ ಗವಾಯಿಗಳ ಸ್ಮರಣಾರ್ಥ ಸರ್ಕಾರ ಶೋಕಾಚರಣೆ ಆಚರಿಸಲು ರಜೆ ನೀಡಿದ್ದನ್ನು ವೈದ್ಯ ಸಮೂಹ ಈ ರೀತಿ ದುರುಪಯೋಗಪಡಿಸಿಕೊಂಡಿದ್ದಾರೆ.
ಕಿಮ್ಸ್ ವೈದ್ಯರು ಕನಿಷ್ಠ ಪ್ರಜ್ಞೆ ಇಲ್ಲದೆ ಅತಿಯಾಗಿ ಮದ್ಯ ಸೇವಿಸಿ ನೆಲದ ಮೇಲೆ ನಿಲ್ಲಲು ಆಗದೆ ತೂರಾಡುತ್ತಾ, ಅಸಭ್ಯವಾಗಿ ಕುಣಿದು ಕುಪ್ಪಳಿಸಿ, ನೆಲದ ಮೇಲೆ ಬಿದ್ದು ಒದ್ದಾಡುತ್ತಿರುವ ಸುತ್ತಿರುವ ದೃಶ್ಯ ಖಾಸಗಿ ಸುದ್ದಿವಾಹಿನಿಗಳ ಮೂಲಕ ದೇಶದಾದ್ಯಂತ ಪ್ರಸಾರವಾಗಿದೆ.ಮಧ್ಯರಾತ್ರಿ 1:30ರ ವರೆಗೆ ಪಾನಗೋಷ್ಠಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ವಾಹಿನಿಗಳ ಮುಂದೆ ಹೇಳಿದ್ದಾರೆ.
ರಾಜ್ಯದ ವಿವಿಧೆಡೆಗಳಲ್ಲಿ ಪುಟ್ಟರಾಜ ಗವಾಯಿಗಳ ಶೋಕಾಚರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ಪಾನಗೋಷ್ಠಿ ಮಾಡುವ ಮೂಲಕ ಗವಾಯಿಗಳಿಗೆ, ನಾಡಿನ ಸಂಸ್ಕೃತಿಗೆ ಅವಮಾನ ಮಾಡಿದ ಕಿಮ್ಸ್ನ ವೈದ್ಯರ ವಿರುದ್ಧ ಹುಬ್ಬಳ್ಳಿಯ ಜೈ ಭೀಮಾ ಸಂಘಟನೆ ಮತ್ತು ಕದಂಬ ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸಚಿವ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಶಿ, ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ, ಕಾಂಗ್ರೆಸ್ ಮುಖಂಡರು ತೀವ್ರವಾಗಿ ಖಂಡಿಸಿದ್ದು, ವೈದ್ಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications