ಕೆಂಡಕಾರಿದ್ದ ಸಂಜಯ್ ದತ್ ಗೆ ಸಮನ್ಸ್

ಕಳೆದ ವರ್ಷದ ಲೋಕಸಭಾ ಚುನಾವಣೆಯ ವೇಳೆ ಸ್ಥಳೀಯ ಎಸ್ಪಿ ಅಭ್ಯರ್ಥಿ ಅರ್ಷದ್ ಜಮಾಲಾ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ದತ್ ಉದ್ರೇಕಕಾರಿ ಭಾಷಣ ಮಾಡಿದ್ದರೆಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ನ್ಯಾಯಾಲಯವೊಂದರ ನ್ಯಾಯಾಧೀಶ ಕೃಷ್ಣ ಕುಮಾರ್ 51ರ ಹರೆಯದ ಚಿತ್ರ ನಟ ಸಂಜಯ್ ದತ್ ಮತ್ತು ಎಸ್ಪಿ ನಾಯಕ ಅರ್ಷದ್ ಜಮಾಲ್ಗೆ ಸಮನ್ಸ್ ಜಾರಿಗೊಳಿಸಿದ್ದಾರೆ.
ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಂದರ್ಭ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂಜಯ್ ದತ್, ಚುನಾವಣಾ ಪ್ರಚಾರದಲ್ಲಿ ಈ ರೀತಿ ಮಾತನಾಡಿದ್ದುದು ವಿವಾದಕ್ಕೆ ಕಾರಣವಾಗಿತ್ತು.











Click it and Unblock the Notifications