ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಂಡಕಾರಿದ್ದ ಸಂಜಯ್ ದತ್ ಗೆ ಸಮನ್ಸ್

By Mrutyunjaya Kalmat
|
Google Oneindia Kannada News

Sanjay Dutt
ಮಾವು (ಉ.ಪ್ರ.) ಸೆ. 21 : ಕಳೆದ ವರ್ಷ ಇಲ್ಲಿ ನಡೆದ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪವನ್ನು ಎದುರಿಸುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಸ್ಥಳೀಯ ನ್ಯಾಯಾಲಯವೊಂದು ಸಮನ್ಸ್ ಜಾರಿಗೊಳಿಸಿದೆ. ಈ ಕುರಿತು ಡಿಸೆಂಬರ್ 10ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ.

ಕಳೆದ ವರ್ಷದ ಲೋಕಸಭಾ ಚುನಾವಣೆಯ ವೇಳೆ ಸ್ಥಳೀಯ ಎಸ್‌ಪಿ ಅಭ್ಯರ್ಥಿ ಅರ್ಷದ್ ಜಮಾಲಾ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ದತ್ ಉದ್ರೇಕಕಾರಿ ಭಾಷಣ ಮಾಡಿದ್ದರೆಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ನ್ಯಾಯಾಲಯವೊಂದರ ನ್ಯಾಯಾಧೀಶ ಕೃಷ್ಣ ಕುಮಾರ್ 51ರ ಹರೆಯದ ಚಿತ್ರ ನಟ ಸಂಜಯ್ ದತ್ ಮತ್ತು ಎಸ್‌ಪಿ ನಾಯಕ ಅರ್ಷದ್ ಜಮಾಲ್‌ಗೆ ಸಮನ್ಸ್ ಜಾರಿಗೊಳಿಸಿದ್ದಾರೆ.

ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಂದರ್ಭ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂಜಯ್ ದತ್, ಚುನಾವಣಾ ಪ್ರಚಾರದಲ್ಲಿ ಈ ರೀತಿ ಮಾತನಾಡಿದ್ದುದು ವಿವಾದಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X