Get Updates
Get notified of breaking news, exclusive insights, and must-see stories!

ರೊಕ್ಕ ಕೊಡ್ಲಿಲ್ಲ ಅದಕ್ಕೆ ಮಂತ್ರಿಗಿರಿ ತಪ್ಪಿತು!

CT Ravi
ಬೆಂಗಳೂರು, ಸೆ. 21 : ವ್ಯವಹಾರ ದೃಷ್ಟಿಯಲ್ಲಿಟ್ಟುಕೊಂಡು ಮಂತ್ರಿಗಿರಿ ನೀಡಲಾಗಿದೆ. ಆದರೆ, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದರಿಂದ ಮಂತ್ರಿಗಿರಿ ಸಿಗಲಿಲ್ಲ ಎಂದು ಶಾಸಕ ಸಿ ಟಿ ರವಿ ತಮ್ಮ ನೋವನ್ನು ಹೊರಹಾಕಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯ ಜನ ತನಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದರು. ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರು ಅದಕ್ಕೆ ಸ್ಪಂದಿಸದ ಕಾರಣ ನೋವಾಗಿದೆ ಎಂದರು. ಪ್ರಾಮಾಣಿಕತೆ, ಪಕ್ಷ ನಿಷ್ಠೆ, ಸೈದ್ಧಾಂತಿಕ ಹೋರಾಟ ನಡೆಸಿ ಬಂದವರಿಗೆ ಬಿಜೆಪಿಯಲ್ಲಿ ಸ್ಥಾನಮಾನ ಇಲ್ಲ. ವ್ಯವಹಾರದ ದೃಷ್ಟಿಯಿಂದ ಬಂದವರಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ. ಇದರಿಂದ ತನಗೆ ಅತೀವ ನೋವಾಗಿದೆ ಎಂದು ರವಿ ಹೇಳಿದರು.

ಕಳ್ಳರ, ಸುಳ್ಳರ ಕಾಲವಯ್ಯ

ಪಕ್ಷದಲ್ಲಿ ನಿಷ್ಠಾವಂತರಿಗೆ ಅವಕಾಶವಿಲ್ಲ. ಕಳ್ಳರು, ಸುಳ್ಳರಿಗೆ ಕಾಲ ಎಂದು ಹಿರಿಯ ಬಿಜೆಪಿ ಶಾಸಕ ಶಂಕರಲಿಂಗೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಪುಟದಲ್ಲಿ ಸ್ಥಾನ ಕೈತಪ್ಪಿತು ಎನ್ನುವುದು ಖಾತ್ರಿಯಾಗುತ್ತಿದ್ದಂತೆಯೇ ಮಾಧ್ಯಮಗಳ ಮುಂದೆ ಬಂದ ಶಂಕರಲಿಂಗೇಗೌಡ, ನನ್ನ ಬಳಿ ಸೂಟ್ ಕೇಸ್ ಇಲ್ಲ. ಹೀಗಾಗಿ ನನಗೆ ಸಂಪುಟದಲ್ಲಿ ಅವಕಾಶ ಸಿಗಲಿಲ್ಲ ಎಂದು ಅವರು ಕಿಡಿಕಾರಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+