ನಿಗಮ ಮಂಡಳಿಗೆ ಶೀಘ್ರವೇ ಅಧ್ಯಕ್ಷರ ನೇಮಕ

ಸದ್ಯ ನಡೆದಿರುವ ಸಂಪುಟ ವಿಸ್ತರಣೆ ಎಲ್ಲರಿಗೂ ಸಮಾಧಾನ ತಂದಿದ್ದು, ಯಾವುದೇ ಗೊಂದಲ ಸೃಷ್ಟಿಯಾಗಿಲ್ಲ.ಯಾವ ಶಾಸಕನೂ ಬಂಡಾಯ ಎದ್ದಿಲ್ಲ. ಇಲ್ಲವೂ ಸುಸೂತ್ರವಾಗಿ ಪೂರ್ಣವಾಗಲಿದೆ ಎಂದು ಈಶ್ವರಪ್ಪ ನೆಮ್ಮದಿಯ ನಿಟ್ಟಿಸಿರು ಬಿಟ್ಟರು. ನಿಗಮ-ಮಂಡಳಿಗಳಲ್ಲಿ ಪ್ರಾತಿನಿಧ್ಯ ಸಚಿವ ಸ್ಥಾನ ಸಿಗದ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಲು ಪಕ್ಷವು ತೀರ್ಮಾನಿಸಿದೆ.
ಮುಂದಿನ 15 ದಿನದಲ್ಲಿ ಆ ಕಾರ್ಯ ನಡೆಯಲಿದ್ದು, ಖಾಲಿಯಿರುವ ಸಂಸ್ಥೆಗಳಿಗೆ ನೇಮಕ ಮಾಡಲಾಗುವುದು ಎಂದು ಹೇಳಿದರು. ಅಲ್ಲದೆ, ಆಯಾ ವಿಧಾನಸಭಾ ಕ್ಷೇತ್ರಗಳ ನಾಲ್ಕು ಮಂದಿಗೆ ರಾಜ್ಯ ಮಟ್ಟದ ನಿಗಮ-ಮಂಡಳಿಗಳಲ್ಲಿ ಸದಸ್ಯ ಸ್ಥಾನ ನೀಡಲು ಪಕ್ಷವು ಉದ್ದೇಶಿಸಿದೆ. ಅವುಗಳಲ್ಲಿ ತಲಾ ಒಂದು ಸ್ಥಾನವನ್ನು ಸಾಮಾನ್ಯ, ಪರಿಶಿಷ್ಟ, ಹಿಂದುಳಿದ ಹಾಗೂ ಮಹಿಳಾ ವರ್ಗದಿಂದ ಆಯ್ಕೆ ಮಾಡಲಾಗುವುದು. ಇವುಗಳನ್ನು ಪಕ್ಷಕ್ಕಾಗಿ ದುಡಿದವರಿಗೆ ನೀಡುವುದಾಗಿ ಈಶ್ವರಪ್ಪ ಸ್ಪಷ್ಟಪಡಿಸಿದರು.












Click it and Unblock the Notifications