ಶೋಭಾಗೆ ತುಮಕೂರು ಜಿಲ್ಲಾ ಉಸ್ತುವಾರಿ?

ಪ್ರತಿವಾರಜಿಲ್ಲೆಗಳಲ್ಲಿ ಅಭಿವೃದ್ಧಿ ಯೋಜನೆಗಳ ಕುರಿತು ಸಭೆ ನಡೆಸಿ ಅದನ್ನು ವರದಿ ಮಾಡುವಂತೆ ಮುಖ್ಯಮಂತ್ರಿಯವರು ಈಗಾಗಲೇ ಸಚಿವರಿಗೆ ಕಟ್ಟಪ್ಪಣೆ ಮಾಡಿದ್ದಾರೆ. ಇದಕ್ಕಾಗಿ ಕೆಲವು ಸಚಿವರಿಗೆ ಹೊಸ ಜಿಲ್ಲೆಗಳ ಉಸ್ತುವಾರಿ ವಹಿಸುವ ಜತೆಗೆ ಸಂಪುಟಕ್ಕೆ ಸೇರ್ಪಡೆಯಾಗಿರುವ ಮಂತ್ರಿಗಳಿಗೂ ಉಸ್ತುವಾರಿ ಹೊಣೆ ವಹಿಸಲು ಕಸರತ್ತು ನಡೆಸಿದ್ದಾರೆ. ಅದರಲ್ಲೂ ಎರಡು ಜಿಲ್ಲೆಗಳ ಉಸ್ತುವಾರಿ ವಹಿಸಿರುವ ಅಶೋಕ್ ಮುಂತಾದವರ ಜೊತೆಗೆ ಹೊಸಬರಿಗೆ ಹೆಚ್ಚುವರಿ ಹೊಣೆಯನ್ನು ವಹಿಸಲಾಗುತ್ತದೆ.
ದಸರಾ ಹಿನ್ನೆಲೆಯಲ್ಲಿ ಸಿದ್ಧತೆಗಳನ್ನು ತ್ವರಿತವಾಗಿ ನಡೆಸಬೇಕಿರುವ ಕಾರಣ ಮೈಸೂರು ಜಿಲ್ಲೆಯಿಂದ ಸಂಪುಟ ಸೇರಿರುವ ರಾಮದಾಸ್ಗೆ ಜಿಲ್ಲಾ ಉಸ್ತುವಾರಿಯ ಹೊಣೆ ಹೊರಿಸಲಾಗುತ್ತದೆ. ವಿಜಯಶಂಕರ್ ಅವರಿಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ನೀಡಲು ಯಡಿಯೂರಪ್ಪ ಮುಂದಾಗಿದ್ದಾರೆ.ಮತ್ತೆ ಸಂಪುಟ ಸೇರ್ಪಡೆಗೊಂಡಿರುವ ಇಂಧನ ಸಚಿವೆ ಶೋಭಾಕರಂದ್ಲಾಜೆಯವರಿಗೆ ತುಮಕೂರು ಜಿಲ್ಲಾ ಉಸ್ತುವಾರಿ ನೀಡುವ ಬಗ್ಗೆ ಚಿಂತನೆ ನಡೆದಿದೆ.
ಅದರಂತೆ ಆಹಾರ ಸಚಿವ ವಿ. ಸೋಮಣ್ಣ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೀಡುವ ವಿಚಾರವೂ ಪರಿಶೀಲನೆಯಲ್ಲಿದೆ. ಸಂಪುಟದಲ್ಲಿರುವ ಪಕ್ಷೇತರ ಸಚಿವರನ್ನೂ ಕೆಲವು ಜಿಲ್ಲೆಗಳ ಉಸ್ತುವಾರಿಗೆ ನೇಮಿಸುವಬಗ್ಗೆ ಮುಖ್ಯಮಂತ್ರಿಗಳು ಚಿಂತನೆ ನಡೆಸಿದ್ದಾರೆ.ಅಧಿಕೃತ ಪಟ್ಟಿ ಇನ್ನೂ ಹೊರಬೀಳಬೇಕಾಗಿದೆ.
ಜಿಲ್ಲಾವಾರು ಉಸ್ತುವಾರಿ ಸಚಿವರ ಸಂಭಾವ್ಯ ಪಟ್ಟಿ ವಿವರ ಇಂತಿದೆ:
* ಶಿವಮೊಗ್ಗ: ಬಿ.ಎಸ್ ಯಡಿಯೂರಪ್ಪ
* ಮೈಸೂರು:ಎ ರಾಮದಾಸ್
* ತುಮಕೂರು: ಶೋಭಾ ಕರಂದ್ಲಾಜೆ
* ಮಂಡ್ಯ-ಬೆಂಗಳೂರು ದಕ್ಷಿಣ : ಆರ್ ಅಶೋಕ್
* ಕೋಲಾರ: ಎಂಪಿ ರೇಣುಕಾಚಾರ್ಯ
* ಚಾಮರಾಜನಗರ : ವಿಜಯಶಂಕರ್
* ಚಿಕ್ಕಬಳ್ಳಾಪುರ: ಮುಮ್ತಾಜ್ ಅಲಿ ಖಾನ್
* ಧಾರವಾಡ: ಜಗದೀಶ್ ಶೆಟ್ಟರ್
* ಬೆಳಗಾವಿ: ಲಕ್ಷ್ಮಣ ಸವದಿ
* ಚಿಕ್ಕಮಗಳೂರು : ವಿ ಸೋಮಣ್ಣ
* ಮಂಗಳೂರು : ಕೃಷ್ಣಪಾಲೇಮಾರ್
* ಉಡುಪಿ: ವಿಎಸ್ ಆಚಾರ್ಯ
* ಕಾರವಾರ: ವಿಶ್ವೇಶ್ವರ ಹೆಗಡೆ ಕಾಗೇರಿ
* ಚಿತ್ರದುರ್ಗ : ಕರುಣಾಕರ ರೆಡ್ಡಿ
* ಗದಗ: ಶ್ರೀರಾಮುಲು
* ಬಳ್ಳಾರಿ: ಜನಾರ್ದನ ರೆಡ್ಡಿ
* ಬಾಗಲಕೋಟೆ: ಮುರುಗೇಶ್ ನಿರಾಣಿ
* ಬೀದರ: ಗೋವಿಂದ ಎಂ ಕಾರಜೋಳ
* ದಾವಣಗೆರೆ: ಎಸ್ ಎ ರವೀಂದ್ರನಾಥ್
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications