ಸವಣೂರಲ್ಲಿ ಸತ್ಯಾತ್ಮತೀರ್ಥರ ಚಾತುರ್ಮಾಸ್ಯ ಸಂಪನ್ನ

ಶ್ರೀ ಸತ್ಯಬೋಧ ತೀರ್ಥರ ಜನ್ಮತ್ರಿಶತಮಾನೋತ್ಸವ ಹಾಗೂ ಶ್ರೀ ಸತ್ಯಧ್ಯಾನತೀರ್ಥರ ಪೀಠಾರೋಹಣದ ಶತಮಾನೋತ್ಸವ ಸಂದರ್ಭದಲ್ಲಿ ಜರುಗಿದ ಈ ಚಾತುರ್ಮಾಸ್ಯ ಕಾರ್ಯಕ್ರಮ ಒಂದು ಐತಿಹಾಸಿಕ ಘಟನೆಯಾಗಿ ದಾಖಲಾಯಿತು. ಶ್ರೀ ಸತ್ಯಬೋಧತೀರ್ಥರ ಬಳಿಕ 240 ವರ್ಷಗಳ ತರುವಾಯ ಸವಣೂರಿನಲ್ಲಿ ಉತ್ತರಾಧಿಮಠಾಧೀಶರ ಚಾತುರ್ಮಾಸ್ಯ ಜರುಗಿದ್ದು, ಈ ಭಾಗದ ಸಹಸ್ರಾರು ಸದ್ಭಕ್ತರಲ್ಲಿ ಜ್ಞಾನದ ಭಕ್ತಿಯ ಗಂಗೆಯನ್ನು ಹರಿಸಿತು.
ನವಾಬರ ಸಂಸ್ಥಾನವಾಗಿದ್ದ ಸವಣೂರಿನಲ್ಲಿ ತಮ್ಮ 15ನೇ ಚಾತುರ್ಮಾಸ್ಯವನ್ನು ಯಶಸ್ವಿಯಾಗಿ ಪೂರೈಸಿದ ಉತ್ತರಾಧಿಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು, ಗುರುವಾರ ಸಂಜೆ ಬಂಕಾಪೂರದ ಐತಿಹಾಸಿಕವಾದ ಗುಹಾ ನರಸಿಂಹ ದೇವರ ಸನ್ನಿಧಿಗೆ ಸೀಮೋಲಂಘನ ಕೈಗೊಂಡರು. ಶ್ರೀಮಠದಲ್ಲಿ ಸತತ 52 ದಿನಗಳ ಕಾಲದ ಚಾತುರ್ಮಾಸ್ಯವನ್ನು ವೈಭವಪೂರ್ಣವಾಗಿ ಕೈಗೊಂಡಿದ್ದ ಶ್ರೀಸತ್ಯಾತ್ಮತೀರ್ಥರು, ಸಹಸ್ರಾರು ಭಕ್ತರ ಜಯಘೋಷಣೆಗಳ ನಡುವೆ ಸೀಮೋಲಂಘನ ಕೈಗೊಂಡು, ಚಾತುರ್ಮಾಸ್ಯವನ್ನು ವಿಧ್ಯುಕ್ತವಾಗಿ ಪೂರ್ಣಗೊಳಿಸಿದರು.
ಶ್ರೀಗಳನ್ನು ಮಠದ ಆವರಣದಿಂದ ಬಂಕಾಪೂರ ಪಟ್ಟಣದವರೆಗೂ ಬೈಕ್ ರ್ಯಾಲಿ ಕೈಗೊಂಡು ಬೀಳ್ಕೊಡುಗೆ ನೀಡಿದರು. ಬಂಕಾಪೂರ ಪಟ್ಟಣದಲ್ಲಿಯೂ ಶ್ರೀಗಳಿಗೆ ಪೂರ್ಣಕುಂಭ ಕಲಶಗಳ ಭವ್ಯ ಸ್ವಾಗತ ನೀಡಿ, ಮೆರವಣಿಗೆಯನ್ನು ಕೈಗೊಳ್ಳಲಾಯಿತು. ಡೊಳ್ಳು ಝಾಂಜ್ ಸೇರಿದಂತೆ ವಿವಿಧ ವಾದ್ಯ ವೈಭವಗಳೊಂದಿಗೆ ಶ್ರೀಗಳ ಮೆರವಣಿಗೆಯನ್ನು ಕೈಗೊಂಡರು.
400 ವರ್ಷಗಳ ಇತಿಹಾಸವನ್ನು ಹೊಂದಿರುವ ಬಂಕಾಪೂರದ ಗುಹಾ ನರಸಿಂಹ ದೇವರ ದರ್ಶವನ್ನು ಪಡೆದುಕೊಂಡ ಶ್ರೀ ಸತ್ಯಾತ್ಮತೀರ್ಥರು, ದೇವರಿಗೆ ಪೂಜೆ ಸಲ್ಲಿಸಿದರು. ಪ್ರತಿಯೊಂದು ಸತ್ಕಾರ್ಯಗಳಿಗೂ ಪ್ರೇರಣೆ ನೀಡುವ, ಯಾವದೇ ವಿಘ್ನಗಳು ಬರದಂತೆ ರಕ್ಷಣೆ ಮಾಡುವ ಹಾಗೂ ಅದನ್ನು ಪೂರ್ಣಗೊಳಿಸುವ ನರಸಿಂಹ ದೇವರು ಎಲ್ಲರಿಗೂ ಮಂಗಳವನ್ನು ಉಂಟು ಮಾಡಲಿ ಎಂದು ಹಾರೈಸಿದರು. ಶ್ರೀ ಯಾದವಾರ್ಯರ ಪುಣ್ಯತಿಥಿ ಪ್ರಯುಕ್ತ ಅವರ ವೈರಾಗ್ಯ ಭಾವದ ಸ್ಮರಣೆಯನ್ನು ಕೈಗೊಂಡರು. ಸೀಮೋಲಂಘನ ಕೈಗೊಂಡ ಶ್ರೀ ಸತ್ಯಾತ್ಮತೀರ್ಥರು ಬಳಿಕ ಸವಣೂರಿಗೆ ಮರಳಿದರು.
ಅವಿಸ್ಮರಣೀಯವಾದ ರೀತಿಯಲ್ಲಿ ಜರುಗಿದ ಈ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಮಗ್ರ ದಕ್ಷಿಣ ಭಾರತದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು, ಪಂಡಿತರು ವಿದ್ವಾಂಸರು ಪಾಲ್ಗೊಂಡಿದ್ದರು. ತಿರುಪತಿ ಸೇರಿದಂತೆ ವಿವಿಧ ಪುಣ್ಯ ಕ್ಷೇತ್ರಗಳಿಂದ ಪವಿತ್ರ ವಸ್ತ್ರಗಳನ್ನು, ಶೇಷ ವಸ್ತ್ರಗಳನ್ನು, ಪ್ರಸಾದಗಳನ್ನು ಸವಣೂರಿಗೆ ತಂದು ಶ್ರೀಗಳಿಗೆ ಸಮರ್ಪಿಸಲಾಯಿತು. ಹತ್ತಾರು ಧಾರ್ಮಿಕ ಕೃತಿಗಳು ಈ ಸಮಾರಂಭದಲ್ಲಿ ಲೋಕಾರ್ಪಣೆಗೊಂಡವು. ಹಲವಾರು ಸಂಗೀತ ವಿದ್ವಾಂಸರು, ಗಾಯಕರು ಸಂಗೀತ ಸುಧೆಯನ್ನು ಹರಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications