ಈಜಿಪುರದ ಮಳೆರಾಡಿಯಲಿ ಸಚಿವರ ಈಜಾಟ

ಈಜಿಪುರದಲ್ಲಿ ರೋಗರುಜಿನಗಳು ಬರದಂತೆ ಜಾಗ್ರತೆ ವಹಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಆರ್ ಅಶೋಕ್ ತಿಳಿಸಿದರು. ಬೆಳ್ಳಂದೂರು ಕೆರೆಯಲ್ಲಿ ಹೂಳು ತುಂಬಿಕೊಂಡಿರುವ ಕಾರಣ ಮಳೆಯ ನೀರು ಇಲ್ಲಿನ ಕಾಲೋನಿಗಳಿಗೆ ನುಗ್ಗುತ್ತಿದೆ. ಸಮಸ್ಯೆಗೆ ಮೂಲ ಕಾರಣ ಇದು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಮಾತನಾಡಿ ಬೆಳ್ಳಂದೂರು ಕೆರೆಯ ಹೂಳು ತೆಗೆಸುವ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಬಿಬಿಎಂಪಿ ಅಧಿಕಾರಿಗಳು, ಕಾರ್ಪೋರೇಟರ್ ಗಳು ರಾತ್ರಿಯಿಡೀ ಜಾಗರಣೆ ಇದ್ದು ಮಳೆಹಾನಿಯನ್ನು ಪರಿಹರಿಸುವಲ್ಲಿ ಶ್ರಮಿಸಿದ್ದಾರೆ. ಬೆಂಗಳೂರಿನ ಮೇಯರ್ ನಟರಾಜ್ ಅವರು ರಾತ್ರಿ ಇಡೀ ನಿದ್ದೆ ಮಾಡದೆ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದಾರೆ ಎಂದು ಅಶೋಕ್ ವಿವರ ನೀಡಿದರು.
ಮಳೆ ಹಾನಿಗೆ ಒಳಗಾದ ಶಾಂತಿನಗರ, ಶೇಷಾದ್ರಿಪುರ ಹಾಗೂ ಮೆಜೆಸ್ಟಿಕ್ ಪ್ರದೇಶಗಳಿಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಅಶೋಕ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಈ ಸಂದರ್ಭದಲ್ಲಿ ಮೇಯರ್ ನಟರಾಜ್, ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.
ಈಜಿಪುರದ ಈಜಾಡಿ ಬಂದ ಸಚಿವರೇ, ಬಿಬಿಎಂಪಿ ಅಧಿಕಾರಿಗಳೇ, ಮಳೆಯಿಂದ ಒದಗಿರುವ ಸಮಸ್ಯೆಯನ್ನು ಈಜಿಯಾಗಿ ತೆಗೆದುಕೊಳ್ಳಬೇಡಿ.
ಮುಖ್ಯಮಂತ್ರಿ ಸಭೆ : ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ನಗರದ ಜನತೆ ಎದುರಿಸುತ್ತಿರುವ ನಾನಾ ಸಮಸ್ಯೆಗಳ ಬಗ್ಗೆ ಚರ್ಚಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಸಂಜೆ ಗೃಹ ಸಚಿವ ಆರ್ ಅಶೋಕ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಮಹಾಪೌರ ನಟರಾಜ್ ಮತ್ತು ಬಿಬಿಎಂಪಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಹತ್ತು ವರ್ಷಗಳಲ್ಲಿ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ಮತ್ತು ಹದಗೆಟ್ಟ ಚರಂಡಿ ವ್ಯವಸ್ಥೆಯಿಂದಾಗಿ ಶುಕ್ರವಾರ ನಾಗರಿಕರು ಸಾಕಷ್ಟು ಪರದಾಡುವಂತಾಯಿತು. ಮಳೆಯಿಂದಾಗಿ ಸಾವು-ನೋವು ಸಂಭವಿಸುವ ಮುನ್ನ ರಾಜ್ಯ ಸರಕಾರ ಎಚ್ಚೆತ್ತುಕೊಳ್ಳಬೇಕಿದೆ. ನಾಗರಿಕರ ಪ್ರಜ್ಞಾಹೀನತೆಯಿಂದಾಗಿಯೂ ಅನೇಕ ಚರಂಡಿಗಳು ಕಟ್ಟಿಕೊಂಡು ಮಳೆ ನೀರು ಸರಾಗವಾಗಿ ಹರಿಯದಂತಾಗಿದೆ. ಈ ನಿಟ್ಟಿನಲ್ಲಿ, ಚರಂಡಿ, ಕೆರೆಯ ಹೂಳೆತ್ತುವುದನ್ನು ಸರಿಯಾಗಿ ಮಾಡುವುದರ ಜೊತೆಗೆ ನಾಗರಿಕರಲ್ಲಿಯೂ ಪರಿಸರ ಪ್ರಜ್ಞೆಯನ್ನು ಬೆಳೆಸುವ ಕಾರ್ಯಕ್ಕೆ ಸರಕಾರ ಕೈಹಾಕಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications