ಬೆಂಗಳೂರು ಮಳೆ : ತಲೆಬರಹಗಳ ಸೊಗಸು

ಬೆಂಗಳೂರು ನಗರವು ನಿನ್ನೆ (ಶುಕ್ರವಾರ) ಕಂಡ ಕಲಶ-ದೊನ್ನೆ ಮಳೆ(!) ಅರ್ಥಾತ್ ಕುಂಭದ್ರೋಣ ಮಳೆಯ ವರದಿಯನ್ನು ಇಂದು (ಶನಿವಾರ) ಮುಖಪುಟದ ಪ್ರಧಾನ ಸುದ್ದಿಯಾಗಿ ಪ್ರಕಟಿಸಿರುವ ಕನ್ನಡ ದಿನಪತ್ರಿಕೆಗಳು ಈ ವರದಿಗೆ ನೀಡಿದ ತಲೆಬರಹಗಳ ಸೊಗಸನ್ನು ತಿಳಿಸುವುದು ನನ್ನೀ ತಲೆಹರಟೆಯ ಉದ್ದೇಶ. ಪೈಪೋಟಿಯಿಂದೆಂಬಂತೆ ನಮ್ಮ ದಿನಪತ್ರಿಕೆಗಳು ಪ್ರತಿದಿನ ಸುದ್ದಿಗಳಿಗೆ ಅರ್ಥಗರ್ಭಿತವೂ ಆಕರ್ಷಕವೂ ಅದ ತಲೆಬರಹಗಳನ್ನು ನೀಡುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಬೆಂಗಳೂರಿನ ಮಳೆಯ ಸುದ್ದಿಗೆ ಇಂದು ಪತ್ರಿಕೆಗಳು ನೀಡಿರುವ ಮುಖಪುಟ ಶೀರ್ಷಿಕೆಗಳೂ ಈ ಪೈಪೋಟಿಯಿಂದ ಹೊರತಾಗಿಲ್ಲ.
ಸಂಯುಕ್ತ ಕರ್ನಾಟಕವು ರಾಜ್ಯದ ಹಲವೆಡೆಯ ಮಳೆಸುದ್ದಿಗೆ, ಒಟ್ಟಾಗಿ, "ಎಲ್ಲೆಲ್ಲೂ ಮಳೆ ಆರ್ಭಟ" ಎಂದು ಸಾಮಾನ್ಯ ತಲೆಬರಹ ನೀಡಿ, ಬೆಂಗಳೂರಿನ ಬಗ್ಗೆ, "ರಾಜಧಾನಿಯಲ್ಲೂ ವರುಣನ ರೌದ್ರಾವತಾರ" ಎಂಬ ಚರ್ವಿತಚರ್ವಣ ಉಪಶೀರ್ಷಿಕೆ ಕೊಟ್ಟು (ಮಳೆನೀರಿನಲ್ಲಿ) ಕೈತೊಳೆದುಕೊಂಡಿದೆ.
ಪ್ರಜಾವಾಣಿಯು, "ಅಬ್ಬರದ ಮಳೆಗೆ ನಗರ ತತ್ತರ" ಎಂದು ತನ್ನ ಸಾಂಪ್ರದಾಯಿಕ ಶೈಲಿಯಲ್ಲಿ ತಲೆಬರಹ ನೀಡಿದರೆ, ಕನ್ನಡಪ್ರಭವು "ಉತ್ತರೆಗೆ ಬಿಬಿಎಂಪಿ ನಿರುತ್ತರ" ಎಂಬ ಶೀರ್ಷಿಕೆ ನೀಡುವ ಮೂಲಕ ಪ್ರಜಾವಾಣಿಯ ತಲೆಬರಹದ ಲಯ ಮತ್ತು ಪ್ರಾಸದಲ್ಲೇ ದಾಳ ಉದುರಿಸಿರುವುದು ಆಕಸ್ಮಿಕ ಸಂಯೋಗ! ಕನ್ನಡಪ್ರಭದ ಶೀರ್ಷಿಕೆ ಹೆಚ್ಚು ಆಕರ್ಷಕ ಮತ್ತು ಹೆಚ್ಚು ಅರ್ಥಪೂರ್ಣವೆಂಬುದಿಲ್ಲಿ ಗಮನಾರ್ಹ. ಇವೆರಡೂ ಪತ್ರಿಕೆಗಳ ತಲೆಬರಹಗಳ ಸಮ್ಮಿಶ್ರಣವೆಂಬಂತೆ ಉದಯವಾಣಿಯು, "ಉತ್ತರೆಗೆ ಜನ ತತ್ತರ" ಎಂಬ ಶೀರ್ಷಿಕೆ ನೀಡಿರುವುದೂ ಕಾಕತಾಳೀಯ!
ಪದಪ್ರಾಸ ಮತ್ತು ಅಕ್ಷರಚಾತುರ್ಯಗಳಿಗೆ ಹೆಸರಾಗಿರುವ ವಿಜಯ ಕರ್ನಾಟಕವು ಕೇವಲ ಪದಪ್ರಾಸದ ಮೊರೆಹೊಕ್ಕು, "ಮುನಿದ ವರುಣ, ನಗರ ದಾರುಣ" ಎಂಬ ತಲೆಬರಹ ನೀಡಿ, ಜೊತೆಗೆ, "ಎರಡು ಗಂಟೆಯಲ್ಲಿ ದಶಕದ ದಾಖಲೆ ಮಳೆ, ಇನ್ನೂ ಇದೆ ನಾಲ್ಕು ದಿನ ರಗಳೆ" ಎಂದು ಉಪಶೀರ್ಷಿಕೆಯಲ್ಲೂ ಅಂತ್ಯಪ್ರಾಸ ಮೆರೆದಿದೆ. ಆದರೆ ವಿಜಯಿ ಮಾತ್ರ ಹೊಸ ದಿಗಂತ.
"ಮರಣ ಮೃದಂಗ" ಎಂಬ ಜನಪ್ರಿಯ ನುಡಿಗಟ್ಟಿಗೆ ಸಂವಾದಿಯೆಂಬಂತೆ, "ಬೆಂಗಳೂರಿನಲ್ಲಿ ವರುಣ ಮೃದಂಗ" ಎಂಬ ಅರ್ಥಗರ್ಭಿತ ಉಪಶೀರ್ಷಿಕೆ ನೀಡಿದ್ದಲ್ಲದೆ, ಪ್ರಸ್ತುತ ಪ್ರತಿಯೊಬ್ಬರ ಬಾಯಲ್ಲೂ ಧ್ವನಿಸುತ್ತಿರುವ, "ಲೈಫು ಇಷ್ಟೇನೆ!" ಎಂಬ ("ಪಂಚರಂಗಿ" ಚಲನಚಿತ್ರದ) ಉಪಶೀರ್ಷಿಕೆ ಕಂ ಹಾಡಿನ ಸಾಲನ್ನು ಬಳಸಿಕೊಂಡು, "ಸಿಟಿ ಲೈಫು ಇಷ್ಟೇನೇ!!" ಎಂಬ ಅದ್ಭುತ, ಅರ್ಥಪೂರ್ಣ ತಲೆಬರಹ ನೀಡಿದೆ.
ಇದಿಷ್ಟು ಮುದ್ರಣ ಮಾಧ್ಯಮದ ದಿನಪತ್ರಿಕೆಗಳ ಸುದ್ದಿಯಾಯಿತು. ನಮ್ಮೀ ದಟ್ಸ್ ಕನ್ನಡ ಜಾಲತಾಣವು ಕೊಟ್ಟಿರುವ ಶೀರ್ಷಿಕೆಯ ಬಗ್ಗೆಯೂ ಒಂದು ಮಾತು ಹೇಳಲಿಚ್ಛಿಸುತ್ತೇನೆ. "ಉತ್ತರಾ ಮಳೆಗೆ ಬೆಂಗಳೂರು ನಗರ ಜೀವನ ತತ್ತರ" ಎಂಬ ಶೀರ್ಷಿಕೆಯನ್ನು ಕೊಟ್ಟಿದೆ. ಇಲ್ಲಿ ಗಮನಾರ್ಹ ಅಂಶಗಳೆಂದರೆ, (1) ಭಾರಿಯಾಗಿ ಸುರಿದ ಮಳೆಯ ಸಂಕೇತವೆಂಬಂತೆ ಭಾರಿ ಉದ್ದದ ಶೀರ್ಷಿಕೆಯನ್ನೇ ಈ ಜಾಣತಾಣ ಕೊಟ್ಟಿದೆ; (2) ಮೇಲೆ ಉಲ್ಲೇಖಿಸಿರುವ ಹಲವು ಪತ್ರಿಕೆಗಳ ತಲೆಬರಹಗಳ ಧ್ವನಿ ಈ ಜಾಣತಾಣದ ಶೀರ್ಷಿಕೆಯಲ್ಲಿ ಅಡಕವಾಗಿದೆ; (3) "ಉತ್ತರಾ, ಮಳೆಗೆ ಬೆಂಗಳೂರು ನಗರ ಜೀವನ ತತ್ತರ" ಎಂದು (ಒಂದು ಅಲ್ಪವಿರಾಮ ಹಾಕಿ) ಓದಿದಾಗ ಈ ತಲೆಬರಹವು ಉತ್ತರೆಯನ್ನು ಸಂಬೋಧಿಸಿ ನೇರ ದೂರು ನೀಡಿದಂತೆ ಭಾಸವಾಗುತ್ತದೆ! ಇಲ್ಲಿಗೆ ತಲೆಹರಟೆ ಸಮಾಪ್ತಂ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications