ಬೆಂಗಳೂರಿನಲ್ಲಿ ವಿಶ್ವ ಉರ್ದು ಸಮ್ಮೇಳನ

ಈ ಸಂಬಂಧ ನಗರದ ಪ್ರೆಸ್ಕ್ಲಬ್ ನಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇದೇ ಮೊದಲ ಬಾರಿ ವಿಶ್ವ ಉರ್ದು ಸಮ್ಮೇಳನ ಹಮ್ಮಿಕೊಳ್ಳುತ್ತಿರುವ ಹೆಮ್ಮೆಗೆ ರಾಜ್ಯ ಉರ್ದು ಅಕಾಡೆಮಿ ಪಾತ್ರವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಸಮ್ಮೇಳನದಲ್ಲಿ ಉರ್ದು ಭಾಷೆ, ಸಾಹಿತ್ಯಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಅಂತಾರಾಷ್ಟ್ರೀಯ ಖ್ಯಾತಿಯ ಬರಹಗಾರರು, ಸಾಹಿತಿಗಳು ಮಂಡಿಸಲಿದ್ದಾರೆ.
ಅಲ್ಲದೆ ಜಾಗತೀಕರಣದ ಹಿನ್ನೆಲೆಯಲ್ಲಿ ವಿವಿಧ ಭಾಷೆಗಳ ಅಸ್ತಿತ್ವಕ್ಕೆ ಎದುರಾಗಿರುವ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ. ಅಮೆರಿಕ, ರಶ್ಯಾ, ಕೆನಡ, ಜರ್ಮನಿ, ಫ್ರಾನ್ಸ್, ಮಾರಿಷಸ್, ಇಂಗ್ಲೆಂಡ್, ಹಾಲೆಂಡ್, ಜಪಾನ್, ಸೌದಿ ಅರೇಬಿಯಾ, ಈಜಿಪ್ಟ್, ಬಾಂಗ್ಲಾದೇಶ, ಪಾಕಿಸ್ತಾನ, ದುಬೈ ಸೇರಿದಂತೆ ಅನೇಕ ದೇಶಗಳ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ವರ್ಣಚಿತ್ರ, ಗಝಲ್ ಹಾಗೂ ಸಾಹಿತ್ಯ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಇದರಲ್ಲಿ ದೇಶ-ವಿದೇಶಗಳ ಸುಮಾರು 400 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬೇಗ್ ತಿಳಿಸಿದರು. ಇದರಲ್ಲಿ ಅಪರೂಪದ ಹಸ್ತಪ್ರತಿ, ಚಿತ್ರಪ್ರದರ್ಶನ, ಪುಸ್ತಕ ಪ್ರದರ್ಶನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ, ಗಝಲ್, ಖವ್ವಾಲಿ ಇತ್ಯಾದಿಗಳನ್ನು ಏರ್ಪಡಿಸಲಾಗುವುದು ಎಂದು ಬೇಗ್ ತಿಳಿಸಿದರು.
ಸಮ್ಮೇಳನದ ಸಿದ್ಧತೆ ಭರದಿಂದ ಸಾಗಿದ್ದು, ಪ್ರಾಥಮಿಕ ಹಂತದ ಕಾರ್ಯಗಳು ನಡೆಯುತ್ತಿವೆ. ಸಮ್ಮೇಳನಕ್ಕೆ ತಗಲುವ ಅಂದಾಜು ವೆಚ್ಚ 3.5 ಕೋ. ರೂ.ಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ವಿನಂತಿಸಲಾಗಿದೆ ಎಂದು ಅವರು ಹೇಳಿದರು. ರಾಜ್ಯ ಸರ್ಕಾರ ಒಂದು ಕೋಟಿ ರೂ. ಅನುದಾನ ನೀಡುವ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಪ್ರೊ. ಎಸ್. ರಹ್ಮತುಲ್ ಹಖ್, ಸದಸ್ಯರಾದ ರವೂಫ್ ಖಾದ್ರಿ, ರಫೀ ಭಂಡಾರಿ ಹಾಗೂ ಸಿದ್ದೀಖ್ ಅಲ್ದೂರಿ ಉಪಸ್ಥಿತರಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications