ಬೆಂಗಳೂರಿನಲ್ಲಿ ವಿಶ್ವ ಉರ್ದು ಸಮ್ಮೇಳನ

ಈ ಸಂಬಂಧ ನಗರದ ಪ್ರೆಸ್ಕ್ಲಬ್ ನಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇದೇ ಮೊದಲ ಬಾರಿ ವಿಶ್ವ ಉರ್ದು ಸಮ್ಮೇಳನ ಹಮ್ಮಿಕೊಳ್ಳುತ್ತಿರುವ ಹೆಮ್ಮೆಗೆ ರಾಜ್ಯ ಉರ್ದು ಅಕಾಡೆಮಿ ಪಾತ್ರವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಸಮ್ಮೇಳನದಲ್ಲಿ ಉರ್ದು ಭಾಷೆ, ಸಾಹಿತ್ಯಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಅಂತಾರಾಷ್ಟ್ರೀಯ ಖ್ಯಾತಿಯ ಬರಹಗಾರರು, ಸಾಹಿತಿಗಳು ಮಂಡಿಸಲಿದ್ದಾರೆ.
ಅಲ್ಲದೆ ಜಾಗತೀಕರಣದ ಹಿನ್ನೆಲೆಯಲ್ಲಿ ವಿವಿಧ ಭಾಷೆಗಳ ಅಸ್ತಿತ್ವಕ್ಕೆ ಎದುರಾಗಿರುವ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ. ಅಮೆರಿಕ, ರಶ್ಯಾ, ಕೆನಡ, ಜರ್ಮನಿ, ಫ್ರಾನ್ಸ್, ಮಾರಿಷಸ್, ಇಂಗ್ಲೆಂಡ್, ಹಾಲೆಂಡ್, ಜಪಾನ್, ಸೌದಿ ಅರೇಬಿಯಾ, ಈಜಿಪ್ಟ್, ಬಾಂಗ್ಲಾದೇಶ, ಪಾಕಿಸ್ತಾನ, ದುಬೈ ಸೇರಿದಂತೆ ಅನೇಕ ದೇಶಗಳ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ವರ್ಣಚಿತ್ರ, ಗಝಲ್ ಹಾಗೂ ಸಾಹಿತ್ಯ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಇದರಲ್ಲಿ ದೇಶ-ವಿದೇಶಗಳ ಸುಮಾರು 400 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬೇಗ್ ತಿಳಿಸಿದರು. ಇದರಲ್ಲಿ ಅಪರೂಪದ ಹಸ್ತಪ್ರತಿ, ಚಿತ್ರಪ್ರದರ್ಶನ, ಪುಸ್ತಕ ಪ್ರದರ್ಶನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ, ಗಝಲ್, ಖವ್ವಾಲಿ ಇತ್ಯಾದಿಗಳನ್ನು ಏರ್ಪಡಿಸಲಾಗುವುದು ಎಂದು ಬೇಗ್ ತಿಳಿಸಿದರು.
ಸಮ್ಮೇಳನದ ಸಿದ್ಧತೆ ಭರದಿಂದ ಸಾಗಿದ್ದು, ಪ್ರಾಥಮಿಕ ಹಂತದ ಕಾರ್ಯಗಳು ನಡೆಯುತ್ತಿವೆ. ಸಮ್ಮೇಳನಕ್ಕೆ ತಗಲುವ ಅಂದಾಜು ವೆಚ್ಚ 3.5 ಕೋ. ರೂ.ಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ವಿನಂತಿಸಲಾಗಿದೆ ಎಂದು ಅವರು ಹೇಳಿದರು. ರಾಜ್ಯ ಸರ್ಕಾರ ಒಂದು ಕೋಟಿ ರೂ. ಅನುದಾನ ನೀಡುವ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಪ್ರೊ. ಎಸ್. ರಹ್ಮತುಲ್ ಹಖ್, ಸದಸ್ಯರಾದ ರವೂಫ್ ಖಾದ್ರಿ, ರಫೀ ಭಂಡಾರಿ ಹಾಗೂ ಸಿದ್ದೀಖ್ ಅಲ್ದೂರಿ ಉಪಸ್ಥಿತರಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications