ಬೆಂಗಳೂರಿಗರೆ ಭಯಪಡಬೇಡಿ : ಶಂಕರ ಬಿದರಿ

ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭೂಗತ ಪಾತಕಿಗಳನ್ನು ಸೆದೆಬಡಿಯಲು ಬೆಂಗಳೂರು ಪೊಲೀಸರು ಸಮರ್ಥರಾಗಿದ್ದಾರೆ ಎಂದರು. ನಗರದ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಮಂತ್ರಿ ಡೆವಪಲರ್ಸ್ ಸಂಸ್ಥೆಯ ಕಚೇರಿಯ ಮೇಲೆ ರವಿ ಪೂಜಾರಿಯ ಸಹಚರರು ಶನಿವಾರ ರಾತ್ರಿ ನಡೆಸಿದ ಪೂರ್ಣ ಮಾಹಿತಿಯನ್ನು ಬಿದರಿ ನೀಡಿದರು.
ದಾಳಿಯ ಹಿನ್ನೆಲೆಯಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಎನ್ ಕೌಂಟರ್ ಮಾಡಿ ರವಿ ಪೂಜಾರಿಯ ಒಬ್ಬ ವ್ಯಕ್ತಿ ಚಂದ್ರು ಅಲಿಯಾಸ್ ಚಂದುನನ್ನು ಕೊಂದು ಹಾಕಲಾಯಿತು. ಗುಂಡು ಹಾರಿಸಿದ ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ತಲೆತಪ್ಪಿಸಿಕೊಂಡಿದ್ದು, ಆತನ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದರು.
ಘಟನೆ ವಿವರ : ಮಂತ್ರಿ ಹೌಸ್ ಕಚೇರಿ ಬಳಿಗೆ ಬಂದಿದ್ದ ರವಿ ಪೂಜಾರಿಯ ಇಬ್ಬರು ಬಂಟರು ರಾತ್ರಿ 9 ರಿಂದ 10 ಗಂಟೆ ಸುಮಾರಿಗೆ ರಿವಾಲ್ವರ್ನಿಂದ ಸುಮಾರು 6 ಸುತ್ತು ಬಾರಿ ಗುಂಡು ಹಾರಿಸಿ ರವಿ ಪೂಜಾರಿಯ ದುಬೈ ಸಂಪರ್ಕ ವಿಳಾಸವುಳ್ಳ ವಿಸಿಟಿಂಗ್ ಕಾರ್ಡ್ ಎಸೆದು ಪರಾರಿಯಾಗಿದ್ದರು. ಆಂಧ್ರಪ್ರದೇಶ ನೋಂದಣಿ ಸಂಖ್ಯೆಯುಳ್ಳ ಯಮಹಾ ಬೈಕನ್ನು ಕೃತ್ಯಕ್ಕೆ ಬಳಸಿದ್ದರು.
ಈ ಮಾಹಿತಿ ಆಧರಿಸಿ ದಾಳಿಕೋರರನ್ನು ಬೆನ್ನಟ್ಟಿದ ಪೊಲೀಸರು ರಾಮಮೂರ್ತಿನಗರದ ಹೊರಮಾವು ಬಳಿಯ ಅಗರ ರಸ್ತೆಯಲ್ಲಿ ಅವರನ್ನು ಅಡ್ಡಗಟ್ಟಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪೂಜಾರಿಯ ಸಹಚರರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಪೂಜಾರಿಯ ಸಹಚರ ಚಂದ್ರು ಅಲಿಯಾಸ್ ಚಂದು ಎಂಬಾತನಿಗೆ ಗುಂಡೇಟು ಬಿದ್ದು ಸಾವನ್ನಪ್ಪಿದ. ಆದರೆ ಮತ್ತೊಬ್ಬ ಪರಾರಿಯಾದ. ಗುಂಡಿನ ಚಕಮಕಿಯಲ್ಲಿ ರಾಮಮೂರ್ತಿನಗರ ಇನ್ಸ್ಪೆಕ್ಟರ್ ಎನ್.ಮಹೇಶ್ ಗಾಯಗೊಂಡಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮದ ಮಂತ್ರಿ ಡೆವಲಪರ್ಸ್ ಮುಖ್ಯಸ್ಥ ಸುಶೀಲ್ ಮಂತ್ರಿಗೆ ರವಿ ಪೂಜಾರಿ ಸಹಚರರು ಹಣ ನೀಡುವಂತೆ ತಿಂಗಳ ಹಿಂದೆ ಬೆದರಿಕೆ ಹಾಕಿದ್ದರು. ಅಲ್ಲದೆ, ಜಯನಗರದಲ್ಲಿರುವ 'ಸೋಮ್ಸ್ ಬಿಲ್ಡರ್ಸ್' ಸಂಸ್ಥೆಯ ಸಿಬ್ಬಂದಿಗೂ ರವಿ ಪೂಜಾರಿ ಸಹಚರರು ಬೆದರಿಕೆ ಹಾಕಿದ್ದರು. ಆದರೆ, ಈ ಬಗ್ಗೆ ಎರಡೂ ಬಿಲ್ಡರ್ಸ್ ಗಳು ಪೊಲೀಸರಿಗೆ ದೂರು ನೀಡಿರಲಿಲ್ಲ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಜಂಟಿ ಅಯುಕ್ತ ಅಲೋಕ್ ಕುಮಾರ್ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications