ಎನ್ ಕೌಂಟರ್ ನಲ್ಲಿ ರವಿ ಪೂಜಾರಿ ಭಂಟನ ಬಲಿ

ಮಧ್ಯರಾತ್ರಿಯಲ್ಲಿ ಶೂಟೌಟ್ :ಮಂತ್ರಿ ಹೌಸ್ ಕಚೇರಿ ಬಳಿಗೆ ಬಂದಿದ್ದ ರವಿ ಪೂಜಾರಿಯ ಇಬ್ಬರು ಬಂಟರುರಾತ್ರಿ 9 ರಿಂದ 10 ಗಂಟೆ ಸುಮಾರಿಗೆ ರಿವಾಲ್ವರ್ನಿಂದ ಸುಮಾರು 6 ಸುತ್ತು ಬಾರಿ ಗುಂಡು ಹಾರಿಸಿ ರವಿ ಪೂಜಾರಿಯ ದುಬೈ ಸಂಪರ್ಕವಿಳಾಸವುಳ್ಳ ವಿಸಿಟಿಂಗ್ ಕಾರ್ಡ್ ಎಸೆದು ಪರಾರಿಯಾಗಿದ್ದರು.
ಆಂಧ್ರಪ್ರದೇಶ ನೋಂದಣಿ ಸಂಖ್ಯೆಯುಳ್ಳ ಯಮಹಾ ಬೈಕನ್ನು ಕೃತ್ಯಕ್ಕೆ ಬಳಸಿದ್ದರು. ಹಾಗೂ ಈ ಮಾಹಿತಿ ಆಧರಿಸಿ ದಾಳಿಕೋರರನ್ನು ಬೆನ್ನಟ್ಟಿದ ಪೊಲೀಸರು ರಾಮಮೂರ್ತಿನಗರದ ಹೊರಮಾವು ಬಳಿಯ ಅಗರ ರಸ್ತೆಯಲ್ಲಿ ಅವರನ್ನು ಅಡ್ಡಗಟ್ಟಿದರು.
ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪೂಜಾರಿಯ ಸಹಚರರ ನಡುವೆ ಗುಂಡಿನ ಚಕಮಕಿ ನಡೆಯಿತು.ಈ ವೇಳೆ ಪೂಜಾರಿಯ ಸಹಚರ ಚಂದ್ರು ಅಲಿಯಾಸ್ ಚಂದು ಎಂಬಾತನಿಗೆ ಗುಂಡೇಟು ಬಿದ್ದು ಸಾವನ್ನಪ್ಪಿದ. ಆದರೆ ಮತ್ತೊಬ್ಬ ಪರಾರಿಯಾದ. ಗುಂಡಿನ ಚಕಮಕಿಯಲ್ಲಿ ರಾಮಮೂರ್ತಿನಗರ ಇನ್ಸ್ಪೆಕ್ಟರ್ ಎನ್.ಮಹೇಶ್ ಗಾಯಗೊಂಡಿದ್ದಾರೆ.
ರಜೆ ದಿನ ದಾಳಿ, ಎಚ್ಚರಿಕೆ ಮಾತ್ರವೇ?: ಪ್ರತಿ ತಿಂಗಳ ನಾಲ್ಕನೇ ಶನಿವಾರ ಮಂತ್ರಿ ಡೆವಲಪರ್ಸ್ನ ಈ ಕಚೇರಿಗೆ ರಜೆ ಇರುತ್ತದೆ. ಅಂತೆಯೇ ಶನಿವಾರವೂ ರಜೆ ಇತ್ತು. ಹಾಗಾಗಿ ಯಾವುದೇ ನೌಕರರು ಕಚೇರಿಗೆ ಬಂದಿರಲಿಲ್ಲ. ಸೆಕ್ಯುರಿಟಿ ಗಾರ್ಡ್ಗಳು ಮಾತ್ರ ಭದ್ರತಾ ಕೆಲಸ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮದ ಮಂತ್ರಿ ಡೆವಲಪರ್ಸ್ ಮುಖ್ಯಸ್ಥ ಸುಶೀಲ್ ಮಂತ್ರಿಗೆ ರವಿ ಪೂಜಾರಿ ಸಹಚರರು ಹಣ ನೀಡುವಂತೆ ತಿಂಗಳ ಹಿಂದೆ ಬೆದರಿಕೆ ಹಾಕಿದ್ದರು. ಅಲ್ಲದೆ, ಜಯನಗರದಲ್ಲಿರುವ 'ಸೋಮ್ಸ್ ಬಿಲ್ಡರ್ಸ್' ಸಂಸ್ಥೆಯ ಸಿಬ್ಬಂದಿಗೂ ರವಿ ಪೂಜಾರಿ ಸಹಚರರು ಬೆದರಿಕೆ ಹಾಕಿದ್ದರು. ಆದರೆ, ಈ ಬಗ್ಗೆ ಎರಡೂ ಬಿಲ್ಡರ್ಸ್ ಗಳು ಪೊಲೀಸರಿಗೆ ದೂರು ನೀಡಿರಲಿಲ್ಲ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಜಂಟಿ ಅಯುಕ್ತ ಅಲೋಕ್ ಕುಮಾರ್ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications