Get Updates
Get notified of breaking news, exclusive insights, and must-see stories!

ಕೆಐಎಡಿಬಿ ಹಗರಣ:ಕಟ್ಟಾ ಮೇಲೆ ತೂಗುಗತ್ತಿ?

Katta Jagadish in KIADB land scam
ಬೆಂಗಳೂರು, ಸೆ.26: ವೈದ್ಯಕೀಯ ಕಾಲೇಜುಗಳಲ್ಲಿ ಅಕ್ರಮವಾಗಿ ಸಿಬ್ಬಂದಿ ನೇಮಕಾತಿ ಆರೋಪದ ಮೇಲೆ ವೈದ್ಯಕೀಯ ಸಚಿವ ರಾಮಚಂದ್ರ ಗೌಡರ ತಲೆ ದಂಡವಾದ ಬೆನ್ನಲ್ಲೇ, ಕೆಐಎಡಿಬಿಐ ಭೂ ಹಗರಣಕ್ಕೆ ಸಂಬಂಧಿಸಿದಂತೆ ಐಟಿ ಬಿಟಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಅವರ ಪುತ್ರ ಪಾಲಿಕೆ ಸದಸ್ಯ ಜಗದೀಶ್ ಅವರ ತಲೆದಂಡಕ್ಕೆ ಸಿದ್ಧತೆಗಳು ನಡೆದಿವೆ ಎನ್ನಲಾಗಿದೆ.

ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೆಐಎಡಿಬಿ ಭೂ ವ್ಯವಹಾರದಲ್ಲಿ ನೂರಾರು ಕೋಟಿ ರುಗಳ ಭಾರೀ ಅಕ್ರಮ ನಡೆಸಿರುವುದು ಬಹಿರಂಗವಾಗಿದ್ದು, ಸಚಿವ ಕಟ್ಟಾ ಹಾಗೂ ಜಗದೀಶ್ ಅವರ ಮೇಲೆ ವರ್ಷದ ಹಿಂದೆ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದರೂ, ರಾಜಕೀಯ ಪ್ರಭಾವಕ್ಕೆ ಒಳಗಾದ ಪೊಲೀಸರು ಕೇಸ್ ಮುಚ್ಚಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಕೆಐಎಡಿಬಿಎ ಭೂ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರಿಗೆ ಅಧಿಕೃತ ದಾಖಲೆ ಲಭ್ಯವಾಗಿದೆ. ಈ ಹಗರಣದಲ್ಲಿ 107 ಕೋಟಿ ರೂ.ಗೂ ಅಧಿಕ ಅಕ್ರಮವಾಗಿದ್ದು, ಈ ಸಂಬಂಧ ಸಚಿವ ಕಟ್ಟಾ ಹಾಗೂ ಅವರ ಪುತ್ರನ ವಿರುದ್ಧ ಲೋಕಾ ಯುಕ್ತರು ನೋಟಿಸ್ ಜಾರಿ ಮಾಡುವ ಸಂಭವವಿದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆರ್ಥಿಕ ವಲಯಕ್ಕಾಗಿ ಜಮೀನು ನೀಡಿದವರಿಗೆ ಕೆಐಎಡಿಬಿಯಿಂದ ನೀಡಲಾಗುವ ಪರಿಹಾರದ ಹಣ ಕಟ್ಟಾ ಅವರ ಪುತ್ರನ ಹೆಸರಿಗೆ ವರ್ಗಾವಣೆಯಾಗಿದೆ ಎಂದು ಹೇಳಲಾಗುತ್ತಿದ್ದು, ಲೋಕಾಯುಕ್ತರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಜಿಸಿ ಅನಿಲ್ ಕುಮಾರ್, ರಾಮಕೃಷ್ಣ ಹಾಗೂ ಚಿಕ್ಕಬೆಟ್ಟಯ್ಯ ಎಂಬ ಮೂವರು ಕೆಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+