ನಮ್ಮ ರಾಜಕಾರಣಿಗಳಿಗೆ ಭಗತ್ ಸಿಂಗ್ ನೆನಪಿದೆಯೆ

ಆದರೆ, ಇಂದಿನ ದಿನವೇ ಅಂದರೆ, ಸೆಪ್ಟೆಂಬರ್ 27ರಂದು ಹುಟ್ಟಿ ಕೇವಲ 23 ವರ್ಷದವರಿದ್ದಾಗಲೇ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯಯೋಧ ಶಹೀದ್ ಭಗತ್ ಸಿಂಗ್ ಅವರ ನೆನಪು ಎಷ್ಟು ಜನರಿಗಿದೆ? ಇನ್ ಕ್ವಿಲಾಬ್ ಜಿಂದಾಬಾದ್ ಎನ್ನುತ್ತಲೇ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ವೀರಯೋಧನನ್ನು ನೆನೆಯಲು ಪಾಪ ನಮ್ಮ ರಾಜಕಾರಣಿಗಳಿಗೆ ಮರೆವಿನ ರೋಗ.
ಕಾಂಗ್ರೆಸ್ ಪಕ್ಷದಿಂದ ಇದನ್ನು ನಿರೀಕ್ಷಿಸಲೂ ಸಾಧ್ಯವಿಲ್ಲ. ಸ್ವಾತಂತ್ರ್ಯ ಯೋಧರಾದ ಸುಭಾಶ್ ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಅವರಿಗೆ ಭಯೋತ್ಪಾದಕ ಹಣೆಪಟ್ಟಿ ಕಟ್ಟಿದ್ದೇ ಕಾಂಗ್ರೆಸ್ ಪಕ್ಷ. ಈ ಕಾರಣ ಭಗತ್ ಸಿಂಗ್ ಮೊಮ್ಮಗ ಅಭಯ್ ಸಿಂಗ್ ಸಂಧು ಆರೋಪಿಸಿದ್ದರೂ ಕೂಡ.
ಭಾರತದ ಸ್ವಾತಂತ್ರ್ಯಕ್ಕಾಗಿ ಉಗ್ರ ಹೋರಾಟ ನಡೆಸಿದ್ದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರನ್ನು 1931ರ ಮಾರ್ಚ್ 23ರಂದು ನೇಣಿಗೇರಿಸಲಾಗಿತ್ತು. ಇವರಲ್ಲಿ ಭಗತ್ ಸಿಂಗ್ ಅವರನ್ನು ಅತ್ಯಂತ ಪ್ರಭಾವಶಾಲಿ ಕಾಂತ್ರಿಕಾರಿ ನಾಯಕ ಎಂದು ಬಣ್ಣಿಸಲಾಗಿದೆ. ನೌಜವಾನ್ ಭಾರತ್ ಸಭಾ, ಕೀರ್ತಿ ಕಿಸಾನ್ ಪಾರ್ಟಿ, ಹಿಂದೂಸ್ತಾನ್ ಸೋಷಿಯಲಿಸ್ಟ್ ರಿಪಬ್ಲಿಕನ್ ಅಸೋಸಿಯೇಶನ್ ಮುಂತಾದ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಭಗತ್ ಯುವಕರಲ್ಲಿ ಸ್ವಾತಂತ್ರ್ಯದ ಕಿಡಿ ಹಚ್ಚಿದ್ದರು. ಭಗತ್ ಅಂದು ಮಾತ್ರವಲ್ಲ ಯುವಕರಿಗೆ ಇಂದಿಗೂ ಸ್ಫೂರ್ತಿದಾಯಕವಾಗಿದ್ದಾರೆ.
ಲಾಲಾ ಲಜಪತ್ ರಾಯ್ ಅವರ ಕೊಲೆಗೆ ಪ್ರತೀಕಾರವಾಗಿ ಬ್ರಿಟಿಷ್ ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟು ಸಾಯಿಸಿದ ಆರೋಪ ಹೊತ್ತಿದ್ದ ಭಗತ್ ಜೈಲಿನಲ್ಲಿ ಕೂಡ ಭಾರತೀಯ ಜೈಲುಹಕ್ಕಿಗಳಿಗೆ ಬ್ರಿಟಿಷರಷ್ಟೇ ಸ್ವಾತಂತ್ರ್ಯ ನೀಡಬೇಕೆಂದು ಉಪವಾಸ ಸತ್ಯಾಗ್ರಹ ನಡೆಸಿದ್ದರು. ಇನ್ನೂ ಮೀಸೆ ಚಿಗುರುವ ಹಂತದಲ್ಲಿಯೇ ಮುರುಟಿಹೋದ ವೀರಯೋಧನಿಗೆ ಈ ಮೂಲಕವಾದರೂ ನೆನೆಯೋಣ. ಅವರ ಸ್ಫೂರ್ತಿ ಸೆಲೆಯನ್ನು ಜೀವಂತವಾಗಿಡೋಣ.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications