ಬಾಲಕಿ ಅತ್ಯಾಚಾರ ಪ್ರಕರಣ: ಕೋಲಿಗೆ ಗಲ್ಲು

2006ರಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ಆರೋಪಿ ಸುರೀಂದರ್ ಕೋಲಿ ರಚನಾ ಎಂಬ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ನಂತರ ಭೀಕರವಾಗಿ ಹತ್ಯೆ ಮಾಡಿರುವುದನ್ನು ಖಚಿತಪಡಿಸಿಕೊಂಡ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ಪರಿಗಣಿಸಿ ತೀರ್ಪಿತ್ತಿದೆ. 2006ರ ನಿಥಾರಿ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸಿಬಿಐನ ವಿಶೇಷ ನ್ಯಾಯಾಲಯ ಇಂದು ಮೊನಿಂದರ್ ಪಂಧೇರ್ ಹಾಗೂ ಸುರೀಂದರ್ ಕೊಲಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಆರೋಪಿ ಕೋಲಿ ವಿರುದ್ಧ ಐಪಿಸಿ ಸೆಕ್ಷನ್302 ಕೊಲೆ ಆರೋಪ, 346ರ ಅಪಹರಣ ಹಾಗೂ ಹತ್ಯೆ,201ರ ಪ್ರಕಾರ ಸಾಕ್ಷ್ಯ ನಾಶ, 376ರ ಪ್ರಕಾರ ಅತ್ಯಾಚಾರಕ್ಕೆ ಶಿಕ್ಷೆ ಆರೋಪದಡಿ ವಿಶೇಷಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎ.ಕೆ.ಸಿಂಗ್ ಅವರು ದೋಷಿ ಎಂದು ತೀರ್ಪಿತ್ತಿದ್ದಾರೆ.
ಸರಣಿ ಹತ್ಯೆ ಪ್ರಕರಣ ರುವಾರಿಗಳು: ಒಟ್ಟು 122 ದಿನಗಳ ಕಾಲ ನಡೆದ ಈ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಒಟ್ಟು 46 ಸಾಕ್ಷಿಗಳನ್ನು ಪಡೆದಿದ್ದರು. 2006ರಲ್ಲಿ ತನ್ನ ಅಜ್ಜಿ ತಾತನ ಮನೆಗೆ ಹೊರಟಿದ್ದ 9 ವರ್ಷದ ರಚನಾ ಲಾಲ್ ಎಂಬ ಬಾಲಕಿಯನ್ನು ಅಪಹರಿಸಿದ್ದ ಕೋಲಿ ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿದ್ದ.
ಇದಾದ ನಂತರ ರಚನಾ ಪೋಷಕರು ನೀಡಿದ್ದ ನಾಪತ್ತೆ ದೂರಿನ ಜಾಡು ಹಿಡಿದು ತನಿಖೆ ನಡೆಸಿದ್ದ ಪೊಲೀಸರು, ಕೋಲಿ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಪಂಧೇರ್ ನಿವಾಸದಲ್ಲಿ ಪತ್ತೆ ಮಾಡಿದ್ದರು. ಸರಣಿ ಹತ್ಯೆ ಪ್ರಕರಣದಲ್ಲಿ ಪಂಧೇರ್ ಆರೋಪಿಯಾಗಿದ್ದರೂ, ಈ ಪ್ರಕರಣದಲ್ಲಿ ಮಾತ್ರ ಆತನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿರಲಿಲ್ಲ.
ಈ ಪ್ರಕರಣ ನಂತರ ನಿಥಾರಿ ಸರಣಿ ಹತ್ಯೆಯ ಇನ್ನೂ 13 ಕೊಲೆ, ಅತ್ಯಾಚಾರ ಪ್ರಕರಣಗಳ ತನಿಖೆ ನಡೆಯಬೇಕಿದೆ. ಕೋಲಿ ಹಾಗೂ ಪಂಧೇರ್ ವಿರುದ್ಧ ಯುವಕರು, ಮಹಿಳೆಯರೂ ಸೇರಿದಂತೆ 19 ಕೊಲೆ, ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಮೊದಲನೇ ಪ್ರಕರಣದಲ್ಲಿ ಕೋಲಿ ಹಾಗೂ ಪಂಧೇರ್ ಇಬ್ಬರೂ ಗಲ್ಲುಶಿಕ್ಷೆಗೆ ಗುರಿಯಾಗಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications