ಮಾನವ ಧರ್ಮ ದೊಡ್ಡದು

ಅಯೋಧ್ಯೆ ವಿವಾದದ ತೀರ್ಪಿನ ನೆಪದಲ್ಲಿ ನಾವು ಹಿಂಸಾಚಾರಕ್ಕಿಳಿದು ಮಾನವಧರ್ಮವನ್ನೇ ಧಿಕ್ಕರಿಸುವ ಅಪರಾಧ ಮಾಡಬಾರದು. ತಂತಮ್ಮ ಬೇಳೆ ಬೇಯಿಸಿಕೊಳ್ಳಲು ನಮ್ಮ ಪುಢಾರಿಗಳು ಈ ಸಂದರ್ಭದಲ್ಲಿ ಹಿಂಸೆಯ ಕಿಚ್ಚು ಹಚ್ಚಲು ಯತ್ನಿಸುತ್ತಾರೆ. ವಿವೇಕಿಗಳಾಗಿರುವ ನಾವು ಅವರ ಈ ಕುಟಿಲಕ್ಕೆ ಬಲಿಯಾಗಬಾರದು. ಅವರ ಕುಟಿಲನೀತಿ ಇನ್ನು ಈ ದೇಶದಲ್ಲಿ ನಡೆಯುವುದಿಲ್ಲವೆಂಬುದನ್ನು ಸಿದ್ಧಮಾಡಿ ತೋರಿಸಲು ಭಾರತದ ಪ್ರಜೆಗಳಾದ ನಮಗಿದೊಂದು ಅವಕಾಶ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಾವು ದೇಶಾದ್ಯಂತ ಶಾಂತಿ ಕಾಪಾಡಿಕೊಂಡುಹೋಗುವ ಮೂಲಕ ಈ ಕುತ್ಸಿತಮತಿಗಳಿಗೆ ತಕ್ಕ ಪಾಠ ಕಲಿಸಬೇಕು.
ಇನ್ನೂ ಒಂದು ಮುಖ್ಯ ಸಂಗತಿಯೆಂದರೆ, ವಿಶ್ವದ ಬಹುಪಾಲು ದೇಶಗಳು ಅಯೋಧ್ಯೆ ತೀರ್ಪಿಗೆ ಭಾರತೀಯರ ಪ್ರತಿಕ್ರಿಯೆ ಹೇಗಿರುತ್ತದೆಂಬುದನ್ನು ಕುತೂಹಲದಿಂದ ಎದುರುನೋಡುತ್ತಿವೆ. ಅಮೆರಿಕಾ, ಚೀನಾ, ಪಾಕಿಸ್ಥಾನದಂತಹ ದೇಶಗಳಂತೂ ಭಾರತದಲ್ಲಿ ಭಾರಿ ಗಲಭೆಗಳಾಗಲಿ ಎಂದು ಹಾರೈಸಿಕೊಂಡಿವೆ. ಯಾವುದೇ ರೀತಿಯ ಗಲಭೆಗೂ ಆಸ್ಪದ ಕೊಡದೆ ಸಂಪೂರ್ಣ ಶಾಂತಿ ಕಾಪಾಡುವ ಮೂಲಕ ಭಾರತೀಯರಾದ ನಾವು ಇಡೀ ವಿಶ್ವವೇ ಹುಬ್ಬೇರಿಸುವಂತೆ ಮಾಡಬೇಕು. ಗಲಭೆ ಹಾರೈಸಿದ ರಾಷ್ಟ್ರಗಳು ಹತಾಶೆಯಿಂದ ತಲೆತಗ್ಗಿಸುವಂತೆ ಮಾಡಬೇಕು. ಭಾರತವನ್ನು ಛಿದ್ರಗೊಳಿಸುವುದು ಅಸಾಧ್ಯವಾದ ಕೆಲಸ ಎಂದು ವಿಶ್ವವು ಅರಿಯುವಂತೆ ಮಾಡುವ ಮೂಲಕ ನಮ್ಮ ಗಟ್ಟಿತನವನ್ನು ಜಗತ್ತಿಗೆ ಸಾರಲು ಇದೊಂದು ಅವಕಾಶ. ಈ ಅವಕಾಶ ಹುಸಿಹೋಗದಿರಲಿ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications