ಕನ್ನಡ ಪತ್ರಿಕೆಗಳಲ್ಲಿ ಅಯೋಧ್ಯಾ ಹೆಡ್ ಲೈನ್ಸ್

ಪದ್ಧತಿ ಪಾಲಿಸುವ ಪತ್ರಿಕೆಯಾದ 'ಪ್ರಜಾವಾಣಿ'ಯು, 'ಅಯೋಧ್ಯೆ : ಮೂರು ಪಾಲು' ಎಂಬ ಶೀರ್ಷಿಕೆ ನೀಡುವ ಮೂಲಕ ನೇರವಾಗಿ ವಿಷಯ ತಿಳಿಸುವ ತನ್ನ ಪದ್ಧತಿಯನ್ನು ಪಾಲಿಸಿದೆ. ಆದರೆ, ಇಡೀ ಅಯೋಧ್ಯೆ ಪಟ್ಟಣವೇ ಮೂರು ಪಾಲಾಗಬೇಕೆಂಬ ಅಪಾರ್ಥಕ್ಕೂ ಈ ಶೀರ್ಷಿಕೆ ಎಡೆಮಾಡಿಕೊಡುತ್ತದೆ!
'ಕನ್ನಡ ಪ್ರಭ'ವು, '3 ಭಾಗ; ಭಾವೈಕ್ಯತೆಗೆ ಪಂಚಾಂಗ' ಎಂದು ತಲೆಬರಹ ನೀಡುವ ಮೂಲಕ ತನ್ನ ಭಾವೈಕ್ಯೋದ್ದೇಶವನ್ನು ಪ್ರಚುರಪಡಿಸಿದೆ.
'ಉದಯವಾಣಿ'ಯು, ತನ್ನ ಬೇರೆ ಬೇರೆ ಆವೃತ್ತಿಗಳಲ್ಲಿ, 'ಜೈ ಜನ್ಮಭೂಮಿ' ಎಂಬ ಆಕರ್ಷಕ ಶೀರ್ಷಿಕೆಯನ್ನೂ ಮತ್ತು 'ರಾಮಜನ್ಮಸ್ಥಾನ' ಎಂಬ, ಅರ್ಥಪೂರ್ಣವೆಂದುಕೊಂಡ, ಆದರೆ ಅತಿಸಾಮಾನ್ಯ ಶೀರ್ಷಿಕೆಯನ್ನೂ ನೀಡಿದೆ.
ಹೊಸತನದ ಹಂಬಲದ 'ವಿಜಯ ಕರ್ನಾಟಕ'ವು, 'ರಾಮ ರಹೀಮ ನಿರ್ಮೋಹಿ' ಎಂದು ಹೊಸಬಗೆಯ, ಆದರೆ, ಅನಾಕರ್ಷಕ ತಲೆಬರಹ ನೀಡಿದೆ.
ವೈದಿಕ ಛಾಪಿನ ಪತ್ರಿಕೆಯಾದ 'ಸಂಯುಕ್ತ ಕರ್ನಾಟಕ'ವು, 'ಶ್ರೀ ರಾಮ ಜಯಂ' ಎಂದು ಮಂತ್ರೋಪಮ ಶೀರ್ಷಿಕೆಯನ್ನೇನೋ ನೀಡಿದೆ, ಆದರೆ, 'ಹೇ ರಾಂ' ಎಂದು ಅದಕ್ಕೊಂದು ಹಿಂಬಾಲ ಸೇರಿಸಿ ವಿಪರೀತಾರ್ಥಕ್ಕೆ ಅವಕಾಶ ಮಾಡಿಕೊಟ್ಟಿದೆ!
'ಹೊಸ ದಿಗಂತ'ವು, 'ಜೈಶ್ರೀರಾಮ್' ಎಂದು ತನ್ನ ಧ್ಯೇಯಕ್ಕೆ ತಕ್ಕುದಾದ ಮತ್ತು ಅರ್ಥಗರ್ಭಿತ ಶೀರ್ಷಿಕೆ ನೀಡಿದೆಯಲ್ಲದೆ, ಉಪಶೀರ್ಷಿಕೆಯನ್ನೂ ಸೇರಿಸಿಕೊಂಡು ಓದಿದಾಗ, 'ಅಯೋಧ್ಯೆಯೇ ರಾಮಜನ್ಮಭೂಮಿ, ಜೈಶ್ರೀರಾಮ್', ಎಂದು ವಿಜಯಘೋಷ ಮೊಳಗುವಂತೆ ಮಾಡಿ ಚಾತುರ್ಯ ತೋರಿದೆ!
ಇನ್ನು, ನಮ್ಮ 'ದಟ್ಸ್ ಕನ್ನಡ'ವು 'ರಾಮ ರಹೀಮ ಇಬ್ಬರಿಗೂ ಜಾಗ' ಮಾಡಿಕೊಟ್ಟಿದೆ. ಇಬ್ಬರ ಭಕ್ತರೂ ಖುಷ್. ಯಾವ ಪತ್ರಿಕೆಯೂ ಮತೀಯ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಶೀರ್ಷಿಕೆಯ ಗೋಜಿಗೆ ಹೋಗದೆ ಸಾಮಾಜಿಕ ಹೊಣೆಗಾರಿಕೆ ಮೆರೆದಿರುವುದು ಸ್ವಾಗತಾರ್ಹ ಸಂಗತಿ.
ಒಂದು ವೇಳೆ ನಾನೇನಾದರೂ ಈ ಪತ್ರಿಕೆಗಳ ಸಂಪಾದಕನಾಗಿದ್ದರೆ ಯಾವ ಬಗೆಯ ಶೀರ್ಷಿಕೆಗಳನ್ನು ಕೊಡುತ್ತಿದ್ದೆ? ಹೀಗೇ ಲಘುಲಹರಿಯಲ್ಲಿ ಬರೆದಿದ್ದೇನೆ, ಕಣ್ಣುಹಾಯಿಸಿ; ಗಂಭೀರವಾಗಿ ತೆಗೆದುಕೊಳ್ಳಬೇಡಿ.
ಇದ್ದದ್ದನ್ನು ಇದ್ದಂತೆ ಹೇಳುವ ಪದ್ಧತಿಯ ಪ್ರಜಾವಾಣಿ : 'ವಿವಾದಿತ ಸ್ಥಳ ಮೂರು ಭಾಗಗಳಲ್ಲಿ ಹಂಚಿಕೆ'.
ವಿಮರ್ಶೋಪದೇಶಭರಿತ ಕನ್ನಡ ಪ್ರಭ : 'ಸರ್ವರಿಗೂ ಪಾಲು: ಸಾಮರಸ್ಯವೆ ಮೇಲು'.
ಆರಕ್ಕೇರದ ಮೂರಕ್ಕಿಳಿಯದ ಧೋರಣೆಯ ಉದಯವಾಣಿ : 'ರಾಮಜನ್ಮಸ್ಥಾನ ಸುಭದ್ರ'.
ಪದಚಾತುರ್ಯ, ಪ್ರಾಸ, ಅಕ್ಷರತ್ರಾಸಗಳಿಗೆ ಜೋತುಬೀಳುವ ವಿಜಯ ಕರ್ನಾಟಕ : 'ರಾಮ್ ಲಲ್ಲಾ, ಪೂರ್ತಿ ಇಲ್ಲ'.
ಧರ್ಮವೆ ಜಯವೆಂಬ ದಿವ್ಯ ಮಂತ್ರ ಜಪಿಸುವ ಸಂಯುಕ್ತ ಕರ್ನಾಟಕ : 'ಸನಾತನ ಧರ್ಮಕ್ಕೆ ಜಯ; ಶ್ರೀರಾಮ ವಿಜಯ'.
ತಾನು ನಂಬಿದ ಧ್ಯೇಯನಿಷ್ಠೆಯ ಗುರಿಕಾರ ಹೊಸ ದಿಗಂತ : 'ಅಂದು ದೇಶ ವಿಭಜನೆ, ಇಂದು ದೇಗುಲಸ್ಥಳ ವಿಭಜನೆ'.
ನನ್ನ-ನಿಮ್ಮ ನೆಚ್ಚಿನ 'ದಟ್ಸ್ ಕನ್ನಡ' : 'ಹಂಚಿಕೆಯ ನೇರ್ಪು; ದಟ್ಸ್ ತೀರ್ಪು'.
ಇತಿ ಶೀರ್ಷಿಕೋಪಾಖ್ಯಾನ ಅರ್ಥಾತ್ ತಲೆಹರಟೆ ಮುಕ್ತಾಯ.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications