ಎಂದಿರನ್ ಸಿನಿಮಾ ಟಿಕೆಟ್ಟಿಗೆ ಹಾಹಾಕಾರ, ಲಾಠಿ ಛಾರ್ಜ್

ಅಯೋಧ್ಯೆ ಪ್ರಕರಣದ ತೀರ್ಪು ಹೊರಬಿದ್ದು ದೇಶವೆಲ್ಲ ಶಾಂತಿ ಮಂತ್ರ ಪಠಿಸುತ್ತಿರುವುದರಿಂದ ಇಂದೇ ಬಿಡುಗಡೆಯಾಗಿರುವ ಚಿತ್ರಕ್ಕೆ ಬೆಳಗಿನ ಆಟಕ್ಕೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಟಿಕೆಟ್ಟುಗಳೆಲ್ಲ ಮೊದಲೇ ಬುಕ್ ಆಗಿದ್ದರಿಂದ ಜನ ಕಾಳಸಂತೆಯಲ್ಲಿ ಟಿಕೆಟ್ ಕೊಳ್ಳುತ್ತಿದ್ದಾರೆ. ಅತಿ ಕಡಿಮೆ ಎಂದರೆ 300 ರು.ಯಿಂದ ಹಿಡಿದು 1000 ರು.ವರೆಗೆ ಕಾಳಸಂತೆಯಲ್ಲಿ ಟಿಕೆಟ್ ಗಳು ಮಾರಾಟವಾಗುತ್ತಿವೆ ಎಂಬ ವರದಿ ಬಂದಿದೆ.
ನಟರಾಜ್ ಚಿತ್ರಮಂದಿರದ ಮುಂದೆ ಭಾರೀ ಜನಸಾಗರ ನೆರೆದಿದ್ದು ಭಾವೋತ್ಕರ್ಷಕ್ಕೆ ಒಳಗಾಗಿರುವ ಅಭಿಮಾನಿಗಳನ್ನು ಚೆದುರಿಸಲು ಪೊಲೀಸರು ಲಾಠಿ ಛಾರ್ಜ್ ಮಾಡಿದ್ದಾರೆ. ಕೆಲವರು ಗಾಯಗೊಂಡಿದ್ದರೂ, ಅಭಿಮಾನಿಗಳ ಉತ್ಸಾಹ ಎಳ್ಳಷ್ಟೂ ಕಡಿಮೆಯಾಗಿಲ್ಲ. ನಗರದಲ್ಲಿ ಒಟ್ಟು 20 ಚಿತ್ರಮಂದಿರಗಳಲ್ಲಿ ಎಂದಿರನ್ ಬಿಡುಗಡೆ ಭಾಗ್ಯ ಕಂಡಿದೆ. ರಾಜ್ಯದಲ್ಲಿ ಒಟ್ಟು 35 ಥಿಯೇಟರುಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ತೆಲುಗು ಅವತರಣಿಕೆ ನಾಲ್ಕು ಮಂದಿರಗಳಲ್ಲಿ ತೆರೆಕಂಡಿದೆ.
ಉಪೇಂದ್ರ ನಟಿಸಿದ್ದ ಕನ್ನಡ ಚಿತ್ರ ಹಾಲಿವುಡ್ ಚಿತ್ರದ ಕಥೆ ಹೋಲುವ ಎಂದಿರನ್ ಚಿತ್ರಕ್ಕೆ ರಜನಿ ಸ್ಟೈಲ್ ಮತ್ತು ರೊಬೊಟ್ ಚಮತ್ಕಾರವೇ ಜೀವಾಳ. ಎಂದಿರನ್ ಮೇನಿಯಾದಿಂದಾಗಿ ಕೆಲ ಚಿತ್ರಗಳು ಬಿಡುಗಡೆ ಮಾಡುವುದನ್ನು ಹಿಂದಕ್ಕೆ ತೆಗೆದುಕೊಂಡಿವೆ. ಆದರೆ, ಹೃದಯದಲಿ ಇದೇನಿದು ಮಾತ್ರ ಸಾಗರ್ ಮತ್ತಿತರ ಚಿತ್ರಮಂದಿರಗಳಲ್ಲಿ ಇಂದು ಬಿಡುಗಡೆಯಾಗಿದೆ.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications