ಎಂದಿರನ್ ಸಿನಿಮಾ ಟಿಕೆಟ್ಟಿಗೆ ಹಾಹಾಕಾರ, ಲಾಠಿ ಛಾರ್ಜ್

ಅಯೋಧ್ಯೆ ಪ್ರಕರಣದ ತೀರ್ಪು ಹೊರಬಿದ್ದು ದೇಶವೆಲ್ಲ ಶಾಂತಿ ಮಂತ್ರ ಪಠಿಸುತ್ತಿರುವುದರಿಂದ ಇಂದೇ ಬಿಡುಗಡೆಯಾಗಿರುವ ಚಿತ್ರಕ್ಕೆ ಬೆಳಗಿನ ಆಟಕ್ಕೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಟಿಕೆಟ್ಟುಗಳೆಲ್ಲ ಮೊದಲೇ ಬುಕ್ ಆಗಿದ್ದರಿಂದ ಜನ ಕಾಳಸಂತೆಯಲ್ಲಿ ಟಿಕೆಟ್ ಕೊಳ್ಳುತ್ತಿದ್ದಾರೆ. ಅತಿ ಕಡಿಮೆ ಎಂದರೆ 300 ರು.ಯಿಂದ ಹಿಡಿದು 1000 ರು.ವರೆಗೆ ಕಾಳಸಂತೆಯಲ್ಲಿ ಟಿಕೆಟ್ ಗಳು ಮಾರಾಟವಾಗುತ್ತಿವೆ ಎಂಬ ವರದಿ ಬಂದಿದೆ.
ನಟರಾಜ್ ಚಿತ್ರಮಂದಿರದ ಮುಂದೆ ಭಾರೀ ಜನಸಾಗರ ನೆರೆದಿದ್ದು ಭಾವೋತ್ಕರ್ಷಕ್ಕೆ ಒಳಗಾಗಿರುವ ಅಭಿಮಾನಿಗಳನ್ನು ಚೆದುರಿಸಲು ಪೊಲೀಸರು ಲಾಠಿ ಛಾರ್ಜ್ ಮಾಡಿದ್ದಾರೆ. ಕೆಲವರು ಗಾಯಗೊಂಡಿದ್ದರೂ, ಅಭಿಮಾನಿಗಳ ಉತ್ಸಾಹ ಎಳ್ಳಷ್ಟೂ ಕಡಿಮೆಯಾಗಿಲ್ಲ. ನಗರದಲ್ಲಿ ಒಟ್ಟು 20 ಚಿತ್ರಮಂದಿರಗಳಲ್ಲಿ ಎಂದಿರನ್ ಬಿಡುಗಡೆ ಭಾಗ್ಯ ಕಂಡಿದೆ. ರಾಜ್ಯದಲ್ಲಿ ಒಟ್ಟು 35 ಥಿಯೇಟರುಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ತೆಲುಗು ಅವತರಣಿಕೆ ನಾಲ್ಕು ಮಂದಿರಗಳಲ್ಲಿ ತೆರೆಕಂಡಿದೆ.
ಉಪೇಂದ್ರ ನಟಿಸಿದ್ದ ಕನ್ನಡ ಚಿತ್ರ ಹಾಲಿವುಡ್ ಚಿತ್ರದ ಕಥೆ ಹೋಲುವ ಎಂದಿರನ್ ಚಿತ್ರಕ್ಕೆ ರಜನಿ ಸ್ಟೈಲ್ ಮತ್ತು ರೊಬೊಟ್ ಚಮತ್ಕಾರವೇ ಜೀವಾಳ. ಎಂದಿರನ್ ಮೇನಿಯಾದಿಂದಾಗಿ ಕೆಲ ಚಿತ್ರಗಳು ಬಿಡುಗಡೆ ಮಾಡುವುದನ್ನು ಹಿಂದಕ್ಕೆ ತೆಗೆದುಕೊಂಡಿವೆ. ಆದರೆ, ಹೃದಯದಲಿ ಇದೇನಿದು ಮಾತ್ರ ಸಾಗರ್ ಮತ್ತಿತರ ಚಿತ್ರಮಂದಿರಗಳಲ್ಲಿ ಇಂದು ಬಿಡುಗಡೆಯಾಗಿದೆ.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications