12 ದಿನ ನ್ಯಾಯಾಂಗ ಬಂಧನಕ್ಕೆ ಕಟ್ಟಾ ಜಗದೀಶ್

ಸೆ.30ರಂದು ಕಟ್ಟಾ ಜಗದೀಶನನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಸಿಟಿ ಸಿವಿಲ್ ನ್ಯಾಯಾಲಯ ಮುಂದೂಡಿದೆ. ಕಟ್ಟಾ ಜಗದೀಶ್ ಅಮಾನತಿಗೆ ಪಟ್ಟುಹಿಡಿದಿರುವ ಕಾಂಗ್ರೆಸ್ ಪಕ್ಷ, ಲಂಚ ಪಡೆದು ಸಿಕ್ಕಿಬಿದ್ದಿದ್ದ ಗೋವಿಂದರಾಜುವನ್ನು ಅಮಾನತು ಮಾಡಿದಂತೆ ಕಟ್ಟಾ ಜಗದೀಶನನ್ನು ಕೂಡ ಅಮಾನತು ಮಾಡಬೇಕೆಂದು ಹೇಳಿದೆ.
ತಪ್ಪು ಮಗನದು, ಅಪ್ಪನಿಗೇಕೆ ಶಿಕ್ಷೆ? : ಮಗ ಮಾಡಿದ ತಪ್ಪಿಗೆ ಅಪ್ಪನಿಗೇಕೆ ಶಿಕ್ಷೆ. ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಮಗ ಹಾಗೂ ವಸಂತನಗರದ ಬಿಬಿಎಂಪಿ ಸದಸ್ಯ ಜಗದೀಶ್ ಕಟ್ಟಾ ಲಂಚ ಪ್ರಕರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರತಿಕ್ರಿಯೆ ಇದು.
ಆರ್ ಎಸ್ಎಸ್ ಕಚೇರಿ ಕೇಶವಕೃಪಾದಲ್ಲಿ ಮುಖಂಡರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಶಿಕ್ಷೆ ಖಚಿತ, ಆದರೆ, ಮಗ ಕಟ್ಟಾ ಜಗದೀಶ್ ಮಾಡಿದ್ದಾರೆ ಎನ್ನಲಾದ ತಪ್ಪಿಗೆ ಅಪ್ಪ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡುಗೇಕೆ ಶಿಕ್ಷೆ. ಲೋಕಾಯುಕ್ತರ ಕೈಯಲ್ಲಿ ಪ್ರಕರಣವಿದೆ. ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಟ್ಟಾ ಜಗದೀಶ್ ವಿಷಯದಲ್ಲಿ ಹೆಚ್ಚಿಗೆ ಹೇಳಲಾರೆ, ಕಾನೂನಿಗೆ ತಲೆಬಾಗುವೆ, ಮುಂದಿನ ಪ್ರತಿಕ್ರಿಯೆ ಏನಿದ್ದರೂ ಲೋಕಾಯುಕ್ತರ ತನಿಖೆ ಮುಗಿದ ಬಳಿಕ ಎಂದು ಯಡಿಯೂರಪ್ಪ ಹೇಳಿದರು. ಆದರೆ, ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ರಾಜೀನಾಮೆಯನ್ನು ಪಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕಳಂಕರ ಕೂಪ : ರಾಜ್ಯದಲ್ಲಿರುವ ಸರಕಾರ ಕಳಂಕಿತರ ಕೂಪ. ಕಟ್ಟಾ ಸುಬ್ರಮಣ್ಯ ನಾಯ್ಡು ರಾಜೀನಾಮೆ ಅಷ್ಟೇ ಅಲ್ಲ. ಕೆಐಎಡಿಬಿ ಹಗರಣದಲ್ಲಿ ಸ್ವಪಕ್ಷಪಾತ ಎಸಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸರಕಾರ ಹೇಗೆಂದರೆ ಎಂದರೆ ಅಲಿಬಾಬಾ ಮತ್ತು 40 ಕಳ್ಳರ ಕೂಟದಂತಿದೆ ಎಂದು ಲೇವಡಿ ಮಾಡಿದರು. ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕಠಿಣ ಕ್ರಮ : ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಬಿಬಿಎಂಪಿ ಸದಸ್ಯ ಕಟ್ಟಾ ಜಗದೀಶ್ ಅವರನ್ನು ರಕ್ಷಿಸುವ ಮಾತೇ ಇಲ್ಲ. ಲೋಕಾಯುಕ್ತರ ತನಿಖೆಯಲ್ಲಿ ಆರೋಪ ಸಾಬೀತಾದರೆ ಕೂಡಲೇ ಅವರನ್ನು ಅಮಾನತುಗೊಳಿಸಲಾಗುವುದು ಮೇಯರ್ ಎಸ್ಕೆ ನಟರಾಜ್ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಲಂಚ ಆರೋಪದಲ್ಲಿ ಸಿಕ್ಕಿಬಿದ್ದು ಅಮಾನತುಗೊಂಡಿರುವ ಗೋವಿಂದರಾಜು ಪ್ರಕರಣ ಮತ್ತು ಕಟ್ಟಾ ಜಗದೀಶ್ ಪ್ರಕರಣ ಬೇರೆಯಾಗಿದೆ. ಏನೇ ಆದರೂ ಆರೋಪ ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಗೋವಿಂದರಾಜು ಹೇಳಿಕೆ : ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಕಟ್ಟಾ ಜಗದೀಶ್ ಅವರನ್ನು ಕೂಡಲೇ ಅಮಾನತುಪಡಿಸಬೇಕು. ಇಲ್ಲದಿದ್ದರೆ ನನ್ನ ಅಮಾನತು ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಲಂಚ ಪ್ರಕರಣವೊಂದರಲ್ಲಿ ಆರೋಪಿಯಾಗಿ ಅಮಾನತುಗೊಂಡಿರುವ ಬಿಬಿಎಂಪಿ ಸದಸ್ಯ ಗೋವಿಂದರಾಜು ಮೇಯರ್ ಅವರನ್ನು ಒತ್ತಾಯಿಸಿದ್ದಾರೆ.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications