ರಾಜೀನಾಮೆ ನೀಡಲ್ಲ : ಕಟ್ಟಾ ಸುಬ್ರಮಣ್ಯ ನಾಯ್ಡು

ಇದು ಪೂರ್ವನಿಯೋಜಿತ ಸಂಚು. ರಾಜಕೀಯವಾಗಿ ನನ್ನನ್ನು ಮುಗಿಸಲು ಕೆಲವರು ಹವಣಿಸಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತು. ಸದ್ಯದಲ್ಲೇ ಅವರ ಹೆಸರು ಬಹಿರಂಗಪಡಿಸುತ್ತೇನೆ. ಲೋಕಾಯುಕ್ತರು ತನಿಖೆ ನಡೆಸುತ್ತಿದ್ದಾರೆ. ಸತ್ಯಾಂಶ ಏನೆಂಬುದು ತನಿಖೆ ಬಳಿಕವೇ ಹೊರಬೀಳಲಿದೆ ಎಂದು ಹೇಳಿದರು.
ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿಯೂ ಕೇಳಿಲ್ಲ. ಅವರೊಂದಿಗೆ ಈ ವಿಚಾರದಲ್ಲಿ ಮಾತುಕತೆಯನ್ನೂ ನಡೆಸಿಲ್ಲ. ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅವರ ಮೇಲೆ ನಂಬಿಕೆ ಇದ್ದು, ಅವರಿಂದ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ತಿಳಿಸಿದರು. ಇದಕ್ಕೂ ಮುನ್ನ ತಮ್ಮ ಪುತ್ರ ಕಟ್ಟಾ ಜಗದೀಶ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ ಎಂಬ ವಿಷಯ ತಿಳಿಯುತ್ತಲೇ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ದೌಡಾಯಿಸಿದ ಕಟ್ಟಾ ಸುಬ್ರಹ್ಮಣ್ಯನಾಯ್ಡು, ಮುಖ್ಯಮಂತ್ರಿ ಜತೆ ಕೆಲ ಹೊತ್ತು ಸಮಾಲೋಚಿಸಿದರು.












Click it and Unblock the Notifications