ಅಯೋಧ್ಯೆ ಕಾಮನ್ವೆಲ್ತ್ ಗಾಂಧಿ ಬಂಧ!

ಸಂಬಂಧವಿದೆ ಮಿತ್ರರೇ. ಮೊನ್ನೆ ಅಯೋಧ್ಯೆ ವಿವಾದದ ತೀರ್ಪು ಬಂತು; ಇಂದು ಗಾಂಧಿಜಯಂತಿ; ನಾಳೆಯಿಂದ ಕಾಮನ್ವೆಲ್ತ್ ಕ್ರೀಡಾಕೂಟ ಆರಂಭ. ಇಷ್ಟೇನಾ ಸಂಬಂಧ? ಕ್ಯಾಲೆಂಡರ್ ಬಂಧ! ಇಷ್ಟೇ ಅಲ್ಲ, ಬಂಧುಗಳೇ, ಇನ್ನೂ ಇದೆ. ಭಾರತದ ಭವಿಷ್ಯವನ್ನು ಹೊಸೆಯುವ ಮತ್ತು ಭಾರತೀಯರ ಹೃದಯಗಳನ್ನು ಬೆಸೆಯುವ ಸಂಬಂಧವಿದೆ.
ಅದೇನಪ್ಪಾ, ಅಂತಹ ಸಂಬಂಧ? ಅದ್ಹೇಗಪ್ಪಾ, ಬೆಸೆಯುವ ಬಂಧ?
ಹೌದು. ಮೊನ್ನೆಯ ತೀರ್ಪಿನಲ್ಲಿ ಸೂರ್ಯವಂಶೀಯ ಶ್ರೀರಾಮಚಂದ್ರನನ್ನು ಒಪ್ಪಿಕೊಳ್ಳಲಾಗಿದೆ, ಅಪ್ಪಿಕೊಳ್ಳಲಾಗಿದೆ. ಅದೇ ವೇಳೆ, ಚಂದ್ರನ ಗುರುತಿನ ಮುಸ್ಲಿಮ್ ಸಮುದಾಯಕ್ಕೂ ಮನ್ನಣೆ ನೀಡಲಾಗಿದೆ. ಇಂದು ನಾವು ಜಯಂತಿ ಆಚರಿಸುತ್ತಿರುವ ಗಾಂಧೀಜಿ, 'ಈಶ್ವರ ಅಲ್ಲಾ ತೇರೋ ನಾಮ್', ಎಂದವರು; ರಾಮರಾಜ್ಯದ ಕನಸು ಕಂಡವರು. ನಾಳೆ ಆರಂಭಗೊಳ್ಳುವ ಕಾಮನ್ವೆಲ್ತ್ ಕ್ರೀಡಾಕೂಟವು ಎಂತಹ ಅವಕಾಶವೆಂದರೆ, ಭಾರತೀಯರ ಸ್ನೇಹ, ಸೌಹಾರ್ದ, ಕ್ರೀಡಾಮನೋಭಾವ, ವಿಭಿನ್ನತೆಯಲ್ಲೂ ಏಕತೆ(ಯು ಭಾರತೀಯರಿಗೆ ನೀಡಿರುವ ಅದ್ಭುತ ಶಕ್ತಿ) ಇವುಗಳನ್ನು ಭಾರತೀಯರು ಸ್ವಯಂ ಮನಗಾಣುವುದು ಮಾತ್ರವಲ್ಲ, ವಿಶ್ವಕ್ಕೇ ಸಾರಲು ಒದಗಿರುವ ಸದವಕಾಶ.
ಹೌದಲ್ವೆ!
ಹ್ಞೂಂ. ಒಂದರ ಹಿಂದೊಂದು ಕೂಡಿಬಂದಿರುವ ಈ ಮೂರು ಸಂದರ್ಭಗಳನ್ನು ಒಟ್ಟಾಗಿ ಭಾವಿಸಿ ನಾವಿಂದು, ವಿಭಿನ್ನ ಮತ-ಸಂಸ್ಕೃತಿಗಳ ನಡುವೆಯೂ, ಒಂದಾಗಿ ಮುನ್ನಡೆವ ಮತ್ತು ಒಂದಾದ ಸಂಕಲ್ಪದಿಂದ ದೇಶವನ್ನು ಮುನ್ನಡೆಸುವ ಮನಸ್ಸನ್ನೇಕೆ ಮಾಡಬಾರದು? ಮೇಲೆ ಹೇಳಿದ ಮೂರು ಸಂದರ್ಭಗಳ ಬಂಧವು ನಮಗೆ ಈ ದಿಸೆಯಲ್ಲಿ ಹೊಸದೊಂದು ಹುಮ್ಮಸ್ಸನ್ನು ಮತ್ತು ಸ್ಫೂರ್ತಿಯನ್ನು ಏಕೆ ನೀಡಬಾರದು? ಎಲ್ಲೋ ಇದ್ದ ಕೋಗಿಲೆಯು ಇನ್ನೆಲ್ಲೋ ಇರುವ ಮಾಮರದ ಮೇಲೆ ಬಂದು ಕುಳಿತು ಧ್ವನಿಗೈಯುತ್ತದೆ. ಇಲ್ಲೇ ಅಕ್ಕಪಕ್ಕದಲ್ಲಿರುವ ನಾವೆಲ್ಲ ಒಮ್ಮನಸ್ಸಿನಿಂದ ಏಕೆ ಬಾಳಬಾರದು? ಒಂದೇ ಧ್ವನಿಯನ್ನೇಕೆ ಹೊರಹೊಮ್ಮಿಸಬಾರದು?
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications