ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ

ಇಂಥ ದಿನದಂದೇ ನಮ್ಮ ರಾಜಕಾರಣಿಗಳು ಯಾವ ರೀತಿ ವರ್ತಿಸುತ್ತಿದ್ದಾರೆ, ಎಂತೆಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅವರ ಪ್ರಾಮಾಣಿಕತೆ ನೈತಿಕತೆ ಯಾವ ಮಟ್ಟಕ್ಕೆ ಇಳಿದಿದೆ ಎಂಬುದನ್ನು ನೋಡಿದರೆ ಇಡೀ ನಾಡೇ ತಲೆ ತಗ್ಗಿಸುವಂತಾಗಿದೆ. ಇಂದಿನ ದಿನ ಬಾಲಭವನದಲ್ಲಿ ಗಾಂಧೀಜಿಗೆ ಹೂವಿನ ಹಾರ ಹಾಕಿ, "ಇಂದು ನಾವು ಗಾಂಧಿ ತತ್ತ್ವಗಳನ್ನು ಪಾಲಿಸದಿದ್ದರೆ ಸತ್ಯ ಸತ್ತುಹೋಗುತ್ತದೆ" ಎಂಬ ಹೇಳಿಕೆ ನೀಡಿದ್ದಾರೆ.
ಅಸಲಿಗೆ ರಾಜಕಾರಣಿಗಳಲ್ಲಿ ಸತ್ಯ ಎಂದೋ ಸತ್ತುಹೋಗಿದೆ, ಗಾಂಧೀಜಿಯ ತತ್ತ್ವಗಳನ್ನು ಎಂದೋ ಗಾಳಿಗೆ ತೂರಲಾಗಿದೆ. ಇತ್ತೀಚಿಗೆ ನಡೆದಿರುವ ವಿದ್ಯಮಾನಗಳನ್ನೇ ಗಮನಿಸಿದರೆ, ದೇವತಾ ಮನುಷ್ಯ ಚಿತ್ರದಲ್ಲಿರುವ ಹಾಡನ್ನು ತಿರುಚಿ 'ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ' ಎಂದು ಹಾಡಿಕೊಳ್ಳುವಂತಾಗಿದೆ.
ಈ ಅಪ್ಪ-ಮಗ ಜೋಡಿಗಳನ್ನು ನೋಡಿ. ಯಡಿಯೂರಪ್ಪ, ರಾಘವೇಂದ್ರ, ವಿಜಯೇಂದ್ರ ; ರಾಮಚಂದ್ರೇಗೌಡ, ಸಪ್ತಗಿರಿಗೌಡ ; ಕಟ್ಟಾ ಸುಬ್ರಮಣ್ಯ ನಾಯ್ಡು, ಕಟ್ಟಾ ಜಗದೀಶ್ ನಾಯ್ಡು... ಈ ಪಟ್ಟಿಗೆ ಅನೇಕ ಹೆಸರುಗಳನ್ನು ಸೇರಿಸಬಹುದು... ಒಂದು ಜೋಡಿ ಅರ್ಕಾವತಿ ಭೂಹಗರಣದಲ್ಲಿ ಗೋಲ್ ಮಾಲ್ ಮಾಡಿದ್ದರೆ, ಇನ್ನೊಂದು ಅಮಾಯಕ ಉದ್ಯೋಗಾರ್ಥಿಗಳಿಗೆ ಮಂಕುಬೂದಿ ಎರಚಿ ಅವ್ಯವಹಾರದಲ್ಲಿ ಭಾಗಿಯಾಗಿದೆ, ಮಗದೊಂದು ಜೋಡಿ ಇನ್ನೊಂದು ಕೆಐಎಡಿಬಿ ಹಗರಣದಲ್ಲಿ ಲಂಚ ನೀಡಿ ಸಿಕ್ಕಿಬಿದ್ದಿದೆ.
ಇವರೆಲ್ಲ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸಿ. ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಹೇಳುತ್ತಿದ್ದಾರೆ. ಗಾಂಧೀಜಿಯ ಹೆಸರಿನಲ್ಲಿ ಪ್ರಮಾಣ ಮಾಡಿ ತಾವು ಸತ್ಯವಂತರೆಂದು ತಮಗೆ ತಾವೇ ಪ್ರಮಾಣಪತ್ರ ನೀಡಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ನಾಚಿಕೆ, ಮಾನ ಮತ್ತು ಮರ್ಯಾದೆ ಕಿಂಚಿತ್ತಾದರೂ ಇದೆಯಾ?
ಮಕ್ಕಳು ಮಾಡಿದ ಹಗರಣಕ್ಕೆ ನಮ್ಮನ್ನೇಕೆ ಎಳೆಯುತ್ತೀರಿ, ಲೋಕಾಯುಕ್ತ ತನಿಖೆಗೆ ಎಲ್ಲಾ ಸಹಕಾರ ನೀಡುತ್ತೇವೆ, ಅನಗತ್ಯವಾಗಿ ನಮ್ಮನ್ನು ಹರಕೆಯ ಕುರಿಗಳನ್ನಾಗಿ ಮಾಡಲಾಗುತ್ತಿದೆ ಎಂಬೆಲ್ಲ ಹೇಳಿಕೆಗಳನ್ನು ನೀಡಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತಾವು ಮತ್ತು ತಮ್ಮ ಮಕ್ಕಳು ಪ್ರಾಮಾಣಿಕರು ಎಂಬಂತೆ ಸೋಗು ಹಾಕುತ್ತಿದ್ದಾರೆ. ತಂದೆಯರ ಕುಮ್ಮಕ್ಕು, ಭಾಗೀದಾರಿಕೆ ಇಲ್ಲದೆ ಮಕ್ಕಳು ರಾಜಾರೋಶವಾಗಿ ಇಂಥ ಭ್ರಷ್ಟಾಚಾರದಲ್ಲಿ ಭಾಗಿಯಾಗಲು ಸಾಧ್ಯವೆ? ದಾರಿ ತಪ್ಪಿದ ಮಗನಿಗೆ ಬುದ್ಧಿ ಹೇಳುವ ಕರ್ತವ್ಯ ಅಪ್ಪನದು. ಆದರೆ, ಅಪ್ಪನೇ ದಾರಿ ತಪ್ಪಿದರೆ? ಇಲ್ಲಿ ಆಗಿರುವುದೇ ಅದು.
ಸತ್ಯ ನುಡಿಯುವ, ಜನರನ್ನು ಧೈರ್ಯವಾಗಿ ಎದುರಿಸುವ, ತನಿಖೆಗೆ ಒಳಪಡುವ ಎದೆಗಾರಿಕೆ ಒಬ್ಬರಲ್ಲೂ ಇಲ್ಲ. ಒಬ್ಬರು ಕದ್ದುಮುಚ್ಚಿ ಲೋಕಾಯುಕ್ತರನ್ನು ಭೇಟಿಯಾಗಿ ತಾವು ಅಮಾಯಕರು ತಮ್ಮನ್ನು ರಕ್ಷಿಸಿ ಎಂದು ಗೋಗರೆದಿದ್ದಾರೆ. ಬಿಜೆಪಿ ಸದ್ಯಕ್ಕೆ ಸಿಲುಕಿರುವ ಭ್ರಷ್ಟಾಚಾರದ ಸುಳಿಯಲ್ಲಿ ಒದ್ದಾಡುತ್ತಿರುವ ಯಡಿಯೂರಪ್ಪನವರಂತೂ, ನನಗೆ ರಾಜಕೀಯವೇ ಬೇಜಾರಾಗಿದೆ, ತಾನೇಕೆ ರಾಜಕೀಯದಲ್ಲಿರಬೇಕು? ಎಂದು ಸಾರ್ವಜನಿಕವಾಗಿಯೇ ಅಲವತ್ತುಕೊಂಡಿದ್ದಾರೆ. ಕಣ್ಣೀರು ಹಾಕುವುದೊಂದೇ ಬಾಕಿ.
ಇವರು ಕನಿಷ್ಠ ಈ ದಿನವಾದರೂ ಗಾಂಧೀಜಿಗೆ, ಲಾಲ್ ಬಹಾದ್ದೂರ್ ಶಾಸ್ತ್ರೀಜಿಗೆ ಹೂವಿನ ಹಾರ ಹಾಕಿ ಸತ್ಯ ನುಡಿಯಲಿ. ಇಲ್ಲದಿದ್ದರೆ ಸತ್ಯ ಮತ್ತು ಪ್ರಾಮಾಣಿಕತೆಯ ದ್ಯೋತಕದಂತಿದ್ದ ಆ ಮಹನೀಯರಿಗೆ ಅವಮಾನ ಮಾಡಿದಂತಾದೀತು.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications