ಖಾದಿ ಉತ್ಪನ್ನಗಳಿಗೆ ವಿಶೇಷ ರಿಯಾಯಿತಿ

ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳ ಮಾರಾಟವನ್ನು ದ್ವಿಗುಣಗೊಳಿಸಲು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನಸಾಮಾನ್ಯರಿಗೆ ಖಾದಿ ಮತ್ತು ಗ್ರಾಮೋದ್ಯೋಗಳ ಉತ್ಪನ್ನಗಳನ್ನು ತಲುಪಿಸುವ ದೃಷ್ಠಿಯಿಂದ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಅಲ್ಲದೆ, ಖಾದಿ ಮತ್ತು ಪಾಲಿವಸ್ತ್ರ ಬಟ್ಟೆಗಳ ಚಿಲ್ಲರೆ ಮಾರಾಟದ ಮೇಲೆ ವರ್ಷವಿಡೀ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತದೆ.
ಅಕ್ಟೋಬರ್ 8 ರಿಂದ 87 ದಿನಗಳ ಕಾಲ ಮೈಸೂರಿನಲ್ಲಿ ನಡೆಯುವ ದಸರಾ ವಸ್ತು ಪ್ರದರ್ಶನದ ಖಾದಿ ಮಳಿಗೆಯಲ್ಲೂ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದರ ಲಾಭವನ್ನು ಪಡೆದುಕೊಂಡು ಖಾದಿ ಮತ್ತು ಗ್ರಾಮೋದ್ಯೋಗ ಕ್ಷೇತ್ರವನ್ನು ಪ್ರೋತ್ಸಾಹಿಸುವಂತೆ ಶಂಕರಗೌಡ ಹರವಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.












Click it and Unblock the Notifications