ಅಯೋಧ್ಯೆ : ಸೌಹಾರ್ದ ಇತ್ಯರ್ಥಕ್ಕೆ ಯತ್ನ

ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರ್ಜಿದಾರರ ಪೈಕಿ ಒಬ್ಬರಾದ ಮೊಹಮದ್ ಹಶೀಮ್ ಅನ್ಸಾರಿ ಅವರು ಅಖಿಲ ಭಾರತೀಯ ಅಖಾಡಾ ಪರಿಷತ್ ಅಧ್ಯಕ್ಷ ಮಹಾಂತ ಜ್ಞಾನದಾಸ್ ಅವರನ್ನು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ವಿವಾದಾತ್ಮಕ ಸ್ಥಳದ ಸಮೀಪದ ಹನುಮಾನ್ ನಗರಿಯಲ್ಲಿನ ಹನುಮನ ದೇವಾಲಯದಲ್ಲಿ ಉಭಯ ನಾಯಕರು ಸುಮಾರು ಒಂದು ಗಂಟೆ ಕಾಲ ರಹಸ್ಯ ಮಾತುಕತೆ ನಡೆಸಿದರು.
ಸೌಹಾರ್ದಯುತ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆಗಳು ನಡೆದವು ಎಂದು ಹೇಳಲಾಗಿದೆ. ಆದರೆ, ಮಾತುಕತೆಯ ವಿವರಗಳನ್ನು ನೀಡಲು ಮಹಾಂತ ನಿರಾಕರಿಸಿದ್ದಾರೆ. ಕೇಂದ್ರೀಯ ವಕ್ಫ್ ಮಂಡಳಿಯ ಸೂಚನೆ ಮೇರೆಗೆ ಮಹಾಂತ ಅವರನ್ನು ಭೇಟಿ ಮಾಡಲು ಬಂದಿರುವುದಾಗಿ ಅನ್ಸಾರಿ ಸ್ಪಷ್ಟಪಡಿಸಿದ್ದಾರೆ.
ಮಾತುಕತೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅನ್ಸಾರಿ, ಈ ನಿಟ್ಟಿನಲ್ಲಿ ಅಖಿಲ ಭಾರತ ಅಖಾಡಾ ಪರಿಷತ್ ಮಧ್ಯವರ್ತಿಯಾಗಿ ಪ್ರಮುಖ ಪಾತ್ರ ವಹಿಸಲಿದೆ. ನಿರ್ಮೋಹಿ ಅಖಾಡಾ ಜೊತೆ ಜ್ಞಾನದಾಸ್ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದರು. ಆದರೆ, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಸುಪ್ರೀಂಕೋರ್ಟ್ ನಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್ ಮಂಡಳಿ ತಿಳಿಸಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications