ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪಗೆ ಭೂಮಿ, ಹಣ, ಪುತ್ರ ವ್ಯಾಮೋಹ

By Mahesh
|
Google Oneindia Kannada News

Janardhan Poojari
ಬೆಂಗಳೂರು, ಅ. 3: ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಪುತ್ರರ ಹಿತಾಸಕ್ತಿಗಾಗಿ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ. ಭೂಮಿ, ಹಣ ಮತ್ತು ಪುತ್ರ ವ್ಯಾಮೋಹಿಯಾಗಿರುವ ಸಿಎಂ ಭೂ ಹಗರಣದಲ್ಲಿ ಭಾಗಿಯಾಗಿರುವಾಗ ರಾಜ್ಯದ ಜನತೆಯ ಅಭಿವೃದ್ಧಿಯ ಬಗ್ಗೆ ಹೇಗೆ ತಾನೇ ಕಾಳಜಿವಹಿಸುತ್ತಾರೆ. ಕೇವಲ ಪುತ್ರರ ಅಭಿವೃದ್ಧಿಗಾಗಿ ಅಕ್ರಮವಾಗಿ ಡಿನೋಟಿಫೈ ಮಾಡಿ ರಾಜ್ಯದ ಅಭಿವೃದ್ಧಿಯ ಬೊಗಳೆ ಬಿಡುತ್ತಿದ್ದಾರೆ. ಅವರಿಗೆ ಅಧಿಕಾರ ದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಜನಾರ್ಧನ ಪೂಜಾರಿ ಪ್ರೆಸ್ ಕ್ಲಬ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ರವಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿ,ಭೂ ಹಗರಣದ ಪ್ರಮುಖ ಆರೋಪಿಯಾಗಿರುವ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲು ಸಿದ್ಧರಾಗಬೇಕು ಎಂದು ಸವಾಲು ಹಾಕಿದ್ದಾರೆ.

ಸೂಟ್ ಕೇಸ್ ರಾಜಕಾರಣ: ಸಂಪುಟದಲ್ಲಿ ಕಳ್ಳರು, ಸುಳ್ಳರು, ಲೂಟಿಕೋರರಿದ್ದಾರೆ. ಸಚಿವ ಸ್ಥಾನ ಪಡೆಯಲು ಯಡಿಯೂರಪ್ಪರಿಗೆ ಸೂಟ್‌ಕೇಸ್ ನೀಡಬೇಕೆಂದು ಶಾಸಕ ಶಂಕರಲಿಂಗೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಇದುವರೆಗೆ ಎಷ್ಟು ಸೂಟ್‌ಕೇಸ್ ಹಣ ಪಡೆದುಕೊಂಡಿದ್ದಾರೆಂಬ ಬಗ್ಗೆ ತನಿಖೆಯಾಗಬೇಕು ಎಂದು ಪೂಜಾರಿ ಲೇವಡಿ ಮಾಡಿದರು.

ಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ: ಬಿಜೆಪಿ ಸರ್ಕಾರದ ಒಂದೊಂದೆ ಹಗರಣಗಳು ಬೆಳಕಿಗೆ ಬರುತ್ತಿವೆ. ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ಅಯೋಗ್ಯ ರೆಂದು ಸಂಪುಟದಿಂದ ಕೈಬಿಟ್ಟು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಮಾಡಿದ್ದೇಕೆ ಎಂದು ಖಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಪ್ರಶ್ನಿಸಿದರು.

ತಮ್ಮ ಇಬ್ಬರು ಪುತ್ರರು, ಅಳಿಯನಿಗೆ ಕೋಟ್ಯಂತರ ರೂ. ಬೆಲೆ ಬಾಳುವ ಭೂಮಿ ಖರೀದಿಸಲು ಸಹಾಯ ಮಾಡಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ನೀಡಿದ್ದು, ಗಂಭೀರ ಲೋಪವೆಸಗಿದ್ದಾರೆ.

ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸಿದ ಜನಾರ್ದನ ಪೂಜಾರಿ, ಮಕ್ಕಳ ಅಭಿವೃದ್ಧಿಯನ್ನು ಯಡಿಯೂರಪ್ಪ ರಾಜ್ಯದ ಅಭಿವೃದ್ಧಿ ಎಂದು ಭಾವಿಸಿದ್ದಾರೆ ಎಂದು ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X