ಕೆಐಎಡಿಬಿ ಹಗರಣದ ಸಿಡಿ ರಿಲೀಸ್ : ರೇವಣ್ಣ

ಕೆಐಎಡಿಬಿ ಹಗರಣದಲ್ಲಿ ಮುಖ್ಯಮಂತ್ರಿ ಮತ್ತು ಅವರ ಮಕ್ಕಳು ಹಾಗೂ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಮಗ ಬಿಬಿಎಂಪಿ ಸದಸ್ಯ ಕಟ್ಟಾ ಜಗದೀಶ್ ಹೆಸರು ಈಗಾಗಲೇ ಬಯಲುಗೊಂಡಿದ್ದು, ಸಾಕ್ಷ್ಯಾಗಳನ್ನು ನಾಶ ಮಾಡಲು ಲಂಚ ನೀಡುತ್ತಿರುವ ಆರೋಪದ ಮೇಲೆ ಕಟ್ಟಾ ಜಗದೀಶ್ ಅವರು ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿದ್ದಾರೆ. ಈ ಮಧ್ಯೆದಲ್ಲಿಯೇ ರೇವಣ್ಣ ಬಿಡುಗಡೆ ಮಾಡಿರುವ ಹಗರಣದ ಸಿಡಿ ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ.
ಕೆಐಎಡಿಬಿ ಹಗರಣದ ಎಲ್ಲ ಪ್ರಕ್ರಿಯೆಗಳು ಕೈಗಾರಿಕ ಮಂತ್ರಿ ಮುರುಗೇಶ ನಿರಾಣಿ ನಿವಾಸದಲ್ಲಿ ನಡೆಯುತ್ತಿದ್ದವು ಜೊತೆಗೆ ಅವರ ಅಪ್ತ ಸಹಾಯಕ ಉಮೇಶ ಎಂಬುವವರು ಎಲ್ಲ ಕೊಡುಕೊಳ್ಳುವ ವ್ಯವಹಾರಗಳ ಡೀಲುಗಳನ್ನು ಮುಗಿಸುತ್ತಿದ್ದರು ಎಂಬ ಅಂಶ ಹೊಂದಿರುವ ಸಿಡಿ ಬಿಡುಗಡೆಗೊಂಡಿದ್ದರಿಂದ ಸರಕಾರ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರೇವಣ್ಣ, ಕೆಐಎಡಿಬಿ ಹಗರಣದ ಪ್ರಮುಖ ಆರೋಪ ಮುಖ್ಯಮಂತ್ರಿ ಯಡಿಯೂರಪ್ಪ ಎಂದಿರುವ ಅವರು ಈ ಪ್ರಕರಣದಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡು ಅಲ್ಲದೇ ಮುರಗೇಶ ನಿರಾಣಿ ಅವರ ಕೈವಾಡವೂ ಇದೆ. ಅವರ ಆಪ್ತ ಕಾರ್ಯದರ್ಶಿ ಉಮೇಶ ಎಂಬುವವರು ಲಂಚ ಸ್ವೀಕರಿಸುತ್ತಿರುವ ದೃಶ್ಯ ಸಿಡಿಯಲ್ಲಿದೆ. ಕೆಐಎಡಿಬಿಯ ಎಲ್ಲ ಡೀಲುಗಳು ನಿರಾಣಿ ನಿವಾಸದಲ್ಲೇ ಕುದುರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಸಿಡಿಯನ್ನು ಒಂದು ತಿಂಗಳ ಹಿಂದೆಯೇ ಚಿತ್ರೀಕರಿಸಲಾಗಿದೆ. ಕೆಐಎಡಿಬಿಯ ಭೂಮಿಯನ್ನು ಉದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ಪ್ರಕರಣದಲ್ಲಿ ಇಡೀ ಸರಕಾರವೇ ಭಾಗಿಯಾಗಿದ್ದು, ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ರೇವಣ್ಣ ಆಗ್ರಹಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications