ಅ.12ಕ್ಕೆ ಸರಕಾರದ ಹಣೆಬರಹಕ್ಕೆ ಮಹೂರ್ತ ಫಿಕ್ಸ್

117 ಸಂಖ್ಯಾಬಲ ಹೊಂದಿರುವ ಆಡಳಿತಾರೂಢ ಬಿಜೆಪಿ ಸರಕಾರದ 14 ಶಾಸಕರು ನಾಯಕತ್ವದ ವಿರುದ್ಧ ಬೇಸತ್ತು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರಿಗೆ ಸಲ್ಲಿಸಿದ್ದಾರೆ. ಹೀಗಾಗಿ ಸರಕಾರದ ಸಂಖ್ಯಾಬಲವೀಗ 103ಕ್ಕೆ ಕುಸಿದಿದೆ. ಆದರೆ, 224 ಸದಸ್ಯ ಬಲ ಹೊಂದಿರುವ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು 113 ಮ್ಯಾಜಿಕ್ ಸಂಖ್ಯೆ ಬೇಕು. ಸರಕಾರ ಅಲ್ಪಮತಕ್ಕೆ ಇಳಿದಿದ್ದರಿಂದ ರಾಜ್ಯಪಾಲರು ಅ. 12 ರಂದು 5 ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಸರಕಾರಕ್ಕೆ ಸೂಚನೆ ನೀಡಿದ್ದಾರೆ.
ಬಹುಮತ ಸಾಬೀತು ವಿಫಲವಾದರೆ? : ಒಂದು ವೇಳೆ ಯಡಿಯೂರಪ್ಪ ನೇತೃತ್ವದ ಸರಕಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದರೆ, ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ. ಆಗ ರಾಜ್ಯಪಾಲರು ಪ್ರತಿಪಕ್ಷಗಳಿಗೆ ಸರಕಾರ ರಚಿಸಲು ಅವಕಾಶ ನೀಡಬಹುದು. ಆಕಸ್ಮಾತಾಗಿ ಪ್ರತಿಪಕ್ಷಗಳಿಗೆ ಈ ಅವಕಾಶ ಒದಗಿ ಬಂದರೆ ಕಾಂಗ್ರೆಸ್ 73, ಜೆಡಿಎಸ್ 28 ಹಾಗೂ ಪಕ್ಷೇತರ 6 ಶಾಸಕರನ್ನು ಸೇರಿಸಿದರೆ ಒಟ್ಟು 107 ಸಂಖ್ಯಾಬಲ ಆಗುತ್ತದೆ. ಧೈರ್ಯದಿಂದ ಸರಕಾರ ರಚನೆ ಮಾಡಿದರೆ, ಹೊಸ ಸರಕಾರಕ್ಕೆ ಬಹುಮತಕ್ಕೆ ಕೆಲ ದಿನಗಳನ್ನು ನೀಡಬಹುದು.
ಇವರಿಗೆ ಬಿಜೆಪಿಯಲ್ಲಿ ಬಂಡಾಯ ಎದ್ದಿರುವ 14 ಶಾಸಕರು ಬೆಂಬಲ ನೀಡಿದರೆ ಕಾಂಗ್ರೆಸ್ ನೇತೃತ್ವದ ಸರಕಾರ ರಚನೆಯಾಗಬಹುದು. ಇನ್ನೊಂದು ವಿಶೇಷ ಸಂಗತಿಯೆಂದರೆ ಇದೀಗ ಬಿಜೆಪಿ ಭಿನ್ನಮತೀಯ ಶಾಸಕರು ಬಂಡಾಯವೆದ್ದಿರುವುದು ನಾಯಕತ್ವದ ವಿರುದ್ಧ ಮಾತ್ರ. ಹೀಗಾಗಿ ಮುಖ್ಯಮಂತ್ರಿ ಬದಲಾದರೆ ಈ ಬಂಡಾಯ ಶಮನ ಆಗಲೂಬಹುದು. ಇದೆಲ್ಲವನ್ನೂ ಅ. 12ರವರೆಗೆ ಕಾದು ನೋಡಬೇಕು ಎಂದು ಮಾಜಿ ಅಡ್ವೋಕೇಟ್ ಜನರಲ್ ಬಿವಿ ಆಚಾರ್ಯ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರು ಪುಣೆಗೆ ಶಿಫ್ಟ್ : ಬಿಜೆಪಿ ಕುದುರೆ ವ್ಯಾಪಾರ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಎಲ್ಲ ಶಾಸಕರನ್ನು ಅ. 12ರವರೆಗೆ ಪುಣೆಯ ಹೊರವಲಯದಲ್ಲಿರುವ ಆಂಬಿ ವ್ಯಾಲಿಯಲ್ಲಿ ಇರಿಸಲು ನಿರ್ಧರಿಸಿದೆ. ಈಗಾಗಲೇ ಕಾಂಗ್ರೆಸ್ ಶಾಸಕರು ಪುಣೆ ಕಡೆಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್, ಅಲ್ಪಮತಕ್ಕೆ ಕುಸಿದಿರುವ ಬಿಜೆಪಿ ಇದೀಗ ಕುದುರೆ ವ್ಯಾಪಾರಕ್ಕೆ ಕೈಹಾಕಿದೆ. ಕಾಂಗ್ರೆಸ್ಸಿನ ಅನೇಕ ಶಾಸಕರನ್ನು ಸಂಪರ್ಕಿಸಿ ಸಚಿವ ಸ್ಥಾನದ ಆಮಿಷ ಮತ್ತು 25 ಕೋಟಿ ರುಪಾಯಿಗಳನ್ನು ನೀಡುವುದಾಗಿ ಹೇಳುತ್ತಿದೆ ಎಂದು ಆರೋಪಿಸಿದರು. ನಮ್ಮ ಶಾಸಕರ ಮೇಲೂ ಬಿಜೆಪಿ ತೀವ್ರ ಒತ್ತಡ ಹಾಕಿರುವ ಅಂಶ ಬೆಳಕಿಗೆ ಬಂದಿದೆ. ಇದೇ ಪರಿಸ್ಥಿತಿ ಮುಂದುವರೆದರೆ, ಬಿಜೆಪಿ ಬಣ್ಣವನ್ನು ಬಯಲು ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಏನೇ ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪ ತಮ್ಮ ಸರಕಾರವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಮತ್ತೊಮ್ಮೆ ಬ್ಲಾಕ್ ಮೇಲ್ ತಂತ್ರ ಆರಂಭಿಸಿದೆ. ಕುದುರೆ ವ್ಯಾಪಾರಕ್ಕೆ ಕೈಹಾಕಿ, ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಮುಂದಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದ್ದಾರೆ.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications