ಪಕ್ಷೇತರ ಸಚಿವರು ಸಂಪುಟದಿಂದ ಡಿಸ್ ಮಿಸ್
ಇಂದು 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಬಹಿರಂಗಗೊಳಿಸುವುದಾಗಿ ಹೇಳಿದ್ದಾರೆ. ಪಕ್ಷೇತರರನ್ನು ಕೈಬಿಟ್ಟು ಪಕ್ಷದ ಹಿರಿಯರಿಗೆ ಹಾಗೂ ಹೊಸಬರಿಗೆ ಸಚಿವ ಸ್ಥಾನ ನೀಡುವ ಕೊನೆಯ ಕಸರತ್ತನ್ನು ಯಡಿಯೂರಪ್ಪ ನಡೆಸಿದ್ದಾರೆ. ನರೇಂದ್ರ ಸ್ವಾಮಿ, ಡಿ ಸುಧಾಕರ್, ಶಿವರಾಜ್ ತಂಗಡಗಿ, ವೆಂಕಟರಮಣಪ್ಪ ಹಾಗೂ ಕೆಲ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಇನ್ನೊಂದು ಬಾಂಬ್ ಹಾಕಿರುವ ಯಡಿಯೂರಪ್ಪ, ಭಿನ್ನಮತ ನಡೆಸಲು ಕೆಲವರು ಶಾಸಕರಿಗೆ 20 ಕೋಟಿ ರುಪಾಯಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ನಿರ್ಧಾರಕ್ಕೆ ಪ್ರತಿಯಾಗಿ ಪಕ್ಷೇತರ ಸಚಿವರು ತಮ್ಮಲ್ಲಿದ್ದ ಸರಕಾರಿ ಕಾರನ್ನು ವಾಪಸ್ ನೀಡಿದ್ದಾರೆ. ಜೊತೆಗೆ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಲು ತಯಾರಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಸಚಿವ ಸಂಪುಟ ಸಭೆಗೆ ಮಾಧ್ಯಮಗಳಿಗೆ ಪ್ರವೇಶ ನೀಡಿಲ್ಲ ಎನ್ನುವುದು ವಿಶೇಷ.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS