ಕೇರಳ ತಳಿಪರಂಬು ರಾಜರಾಜೇಶ್ವರಿಗೆ ಅಡ್ಡಬಿದ್ದ ಯಡ್ಡಿ

ಶಾಸಕರಿಗೆ ನಾನಾ ಬಗೆಯ ಆಮಿಷ ಒಡ್ಡುವ, ನಾನಾ ಬ್ರಾಂಡಿನ ಬಿಸ್ಕತ್ತುಗಳನ್ನು ನೀಡುವ ಹುನ್ನಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ತಾಕತ್ತಿದ್ದರೆ ಒಬ್ಬೇ ಒಬ್ಬ ಜಡಿಎಸ್ ಶಾಸಕನನ್ನು ತಮ್ಮತ್ತ ಸೆಳೆದುಕೊಳ್ಳಲಿ ನೋಡೋಣ ಎಂದು ಕುಮಾರಣ್ಣ ಸವಾಲು ಹಾಕಿದರು.
ಮುಂದೇನಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರ್, ತಮ್ಮನ್ನು ಯಾರೂ ಸಂಪರ್ಕಿಸಿಲ್ಲ, ಕಾಂಗ್ರೆಸ್ಸಿನವರು ತಮ್ಮ ಮನೆ ಬಾಗಿಲು ತಟ್ಟಿಲ್ಲ. ನಾವಾಯಿತು ನಮ್ಮ ಪಾಡಾಯಿತು ಎಂದುಕೊಂಡು ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ ಎಂದರು ಅವರು. ರಾಜ್ಯಕ್ಕೆ ಯಾವುದೋ ಶಾಪ ತಟ್ಟಿದೆ. ಆ ಶಾಪ ನಿವಾರಣೆ ಆಗಬೇಕೆಂಬುದೇ ತಮ್ಮ ಅದಮ್ಯ ಬಯಕೆ ಎಂದು ಎಚ್ ಡಿಕೆ ನುಡಿದರು.
ಅತ್ತ, ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪನವರು, "ನಾಳೆ ಪಾಡ್ಯಮಿ. ಪವಿತ್ರವಾದ ನವರಾತ್ರಿ ಆರಂಭ. ಈ ಸಂದರ್ಭದಲ್ಲಿ ತಾಯಿ ಚಾಮುಂಡಿ ನಮ್ಮನ್ನೆಲ್ಲ ಹರಸಲಿ. ನಾಡಿನ ಜನತೆಗೆ ಒಳ್ಳೆಯದಾಗಲಿ" ಎಂದು ದೈವೀಶಕ್ತಿಗೆ ಶರಣಾದವರಂತೆ ಮಾತನಾಡಿದರು. ಆನಂತರ ಕೇರಳಕ್ಕೆ ಸರಿದ ಕೇರಳದ ತಳಿಪರಂಬು ರಾಜರಾಜೇಶ್ವರಿ ದೇಗುಳದಲ್ಲಿ ಯಡ್ಡಿ ಪೂಜೆ ಪುನಸ್ಕಾರ ಸಲ್ಲಿಸಿದರು. ಅವರೊಂದಿಗೆ ಅವರ ಮಗ ರಾಘವೇಂದ್ರ ಇದ್ದರು.
ರೆಡ್ಡಿ ಸಹೋದರರು ಸೆಡ್ಡು ಹೊಡೆದರ ಪರಿಣಾಮ ಭಿನ್ನಮತ ಶಾಸಕರು ಹೈದರಾಬಾದಿನಲ್ಲಿ ಕುಳಿತು ಹಾವಳಿ ಮಾಡುತ್ತಿದ್ದ ಕಾಲದಲ್ಲಿ ಯಡ್ಡಿ ಸುಬ್ರಮಣ್ಯಕ್ಕೆ ತೆರಳಿ ತುಲಾಭಾರ ಸೇವೆ ಮಾಡಿ ಅಪಾಯದಿಂದ ಪಾರಾದದ್ದನ್ನು ಸ್ಮರಿಸಬಹುದಾಗಿದೆ. ಈ ಬಾರಿ ಅವರನ್ನು ತಳಿಪರಂಬು ರಾಜರಾಜೇಶ್ವರಿ ಕಾಪಾಡುವಳೇ, ಕಾದು ನೋಡಬೇಕು.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications