ಕೇರಳ ತಳಿಪರಂಬು ರಾಜರಾಜೇಶ್ವರಿಗೆ ಅಡ್ಡಬಿದ್ದ ಯಡ್ಡಿ

ಶಾಸಕರಿಗೆ ನಾನಾ ಬಗೆಯ ಆಮಿಷ ಒಡ್ಡುವ, ನಾನಾ ಬ್ರಾಂಡಿನ ಬಿಸ್ಕತ್ತುಗಳನ್ನು ನೀಡುವ ಹುನ್ನಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ತಾಕತ್ತಿದ್ದರೆ ಒಬ್ಬೇ ಒಬ್ಬ ಜಡಿಎಸ್ ಶಾಸಕನನ್ನು ತಮ್ಮತ್ತ ಸೆಳೆದುಕೊಳ್ಳಲಿ ನೋಡೋಣ ಎಂದು ಕುಮಾರಣ್ಣ ಸವಾಲು ಹಾಕಿದರು.
ಮುಂದೇನಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರ್, ತಮ್ಮನ್ನು ಯಾರೂ ಸಂಪರ್ಕಿಸಿಲ್ಲ, ಕಾಂಗ್ರೆಸ್ಸಿನವರು ತಮ್ಮ ಮನೆ ಬಾಗಿಲು ತಟ್ಟಿಲ್ಲ. ನಾವಾಯಿತು ನಮ್ಮ ಪಾಡಾಯಿತು ಎಂದುಕೊಂಡು ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ ಎಂದರು ಅವರು. ರಾಜ್ಯಕ್ಕೆ ಯಾವುದೋ ಶಾಪ ತಟ್ಟಿದೆ. ಆ ಶಾಪ ನಿವಾರಣೆ ಆಗಬೇಕೆಂಬುದೇ ತಮ್ಮ ಅದಮ್ಯ ಬಯಕೆ ಎಂದು ಎಚ್ ಡಿಕೆ ನುಡಿದರು.
ಅತ್ತ, ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪನವರು, "ನಾಳೆ ಪಾಡ್ಯಮಿ. ಪವಿತ್ರವಾದ ನವರಾತ್ರಿ ಆರಂಭ. ಈ ಸಂದರ್ಭದಲ್ಲಿ ತಾಯಿ ಚಾಮುಂಡಿ ನಮ್ಮನ್ನೆಲ್ಲ ಹರಸಲಿ. ನಾಡಿನ ಜನತೆಗೆ ಒಳ್ಳೆಯದಾಗಲಿ" ಎಂದು ದೈವೀಶಕ್ತಿಗೆ ಶರಣಾದವರಂತೆ ಮಾತನಾಡಿದರು. ಆನಂತರ ಕೇರಳಕ್ಕೆ ಸರಿದ ಕೇರಳದ ತಳಿಪರಂಬು ರಾಜರಾಜೇಶ್ವರಿ ದೇಗುಳದಲ್ಲಿ ಯಡ್ಡಿ ಪೂಜೆ ಪುನಸ್ಕಾರ ಸಲ್ಲಿಸಿದರು. ಅವರೊಂದಿಗೆ ಅವರ ಮಗ ರಾಘವೇಂದ್ರ ಇದ್ದರು.
ರೆಡ್ಡಿ ಸಹೋದರರು ಸೆಡ್ಡು ಹೊಡೆದರ ಪರಿಣಾಮ ಭಿನ್ನಮತ ಶಾಸಕರು ಹೈದರಾಬಾದಿನಲ್ಲಿ ಕುಳಿತು ಹಾವಳಿ ಮಾಡುತ್ತಿದ್ದ ಕಾಲದಲ್ಲಿ ಯಡ್ಡಿ ಸುಬ್ರಮಣ್ಯಕ್ಕೆ ತೆರಳಿ ತುಲಾಭಾರ ಸೇವೆ ಮಾಡಿ ಅಪಾಯದಿಂದ ಪಾರಾದದ್ದನ್ನು ಸ್ಮರಿಸಬಹುದಾಗಿದೆ. ಈ ಬಾರಿ ಅವರನ್ನು ತಳಿಪರಂಬು ರಾಜರಾಜೇಶ್ವರಿ ಕಾಪಾಡುವಳೇ, ಕಾದು ನೋಡಬೇಕು.
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications